ಕೆಎಸ್ಟಿಡಿಎಸ್ ಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ವರದಿ ಸಂಪೂರ್ಣ ಸುಳ್ಳು: ಡಿ.ಲಕ್ಷ್ಮೀವೆಂಕಟೇಶ್
ಕೆಎಸ್ಟಿಡಿಎಸ್ ಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ವರದಿ ಸಂಪೂರ್ಣ ಸುಳ್ಳು: ಡಿ.ಲಕ್ಷ್ಮೀವೆಂಕಟೇಶ್ ಬೆಂಗಳೂರು: ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತದ ವಿವಿಧ ಘಟಕಗಳಲ್ಲಿ ಭ್ರಷ್ಟಾಚಾರ ನಡೆದಿರುವುದಾಗಿ ವರದಿಯಾಗಿರುವುದು ಸಂಪೂರ್ಣ ಸುಳ್ಳು ಎಂದು ಕೆಎಸ್ಟಿಡಿಸಿ ಎಂಪ್ಲಾಯಿಸ್ ಯೂನಿಯನ್ ಸ್ಪಷ್ಟಪಡಿಸಿದೆ. ಈ ಕುರಿತು ಬುಧವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಯೂನಿಯನ್ ಅಧ್ಯಕ್ಷ ಡಿ.ಲಕ್ಷ್ಮೀವೆಂಕಟೇಶ್ ಮಾತನಾಡಿ, ನಮ್ಮ ಸಂಘಟನೆಯ ವಿರುದ್ಧ ಸ್ಪರ್ಧಿಸಿ ಹೀನಾಯ ಸೋಲನುಂಡ ವರ್ಕಸ್ ಯೂನಿಯನ್ನ ಅಧ್ಯಕ್ಷರೆನಿಸಿಕೊಂಡ ವ್ಯಕ್ತಿಯೋರ್ವರು ಈ ಎಲ್ಲಾ ಸುಳ್ಳು ಪ್ರಚಾರಗಳಿಗೆ ಕಾರಣಕರ್ತರಾಗಿರುತ್ತಾರೆ ಎಂದು ಆರೋಪಿಸಿದರು. ಪರಾಜಿತ ವರ್ಕಸ್ ಯೂನಿಯನ್ ಅಧ್ಯಕ್ಷರೆನಿಸಿಕೊಂಡ ವ್ಯಕ್ತಿಯು ಕೆಎಸ್ಟಿಡಿಸಿ ನಿಗಮದ ಅಧಿಕಾರಿ ವರ್ಗ, ಕಾರ್ಮಿಕರು ಮತ್ತು ಗುತ್ತಿಗೆದಾರರಿಗೆ ಬೆದರಿಕೆ, ಬ್ಲಾಕ್ ಮೇಲ್ ತಂತ್ರಗಳನ್ನು ಬಳಸಿ ಹಣ ವಸೂಲಿ ದಂಧೆಗಳಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಎ.ಬಾಬು ಪೂಜಾರಿ ಮಾತನಾಡಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಆಡಳಿತ ಹಾಗೂ ನೌಕರರ ವಿರುದ್ಧ ಕೆಲವು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಆರೋಪಗಳು ಹಾಗೂ ಅಪಪ್ರಚಾರಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ನ...