Posts

ಕೆಎಸ್‌ಟಿಡಿಎಸ್ ಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ವರದಿ ಸಂಪೂರ್ಣ ಸುಳ್ಳು: ಡಿ.ಲಕ್ಷ್ಮೀವೆಂಕಟೇಶ್

Image
 ಕೆಎಸ್‌ಟಿಡಿಎಸ್ ಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ವರದಿ ಸಂಪೂರ್ಣ ಸುಳ್ಳು: ಡಿ.ಲಕ್ಷ್ಮೀವೆಂಕಟೇಶ್ ಬೆಂಗಳೂರು: ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತದ ವಿವಿಧ ಘಟಕಗಳಲ್ಲಿ ಭ್ರಷ್ಟಾಚಾರ ನಡೆದಿರುವುದಾಗಿ ವರದಿಯಾಗಿರುವುದು ಸಂಪೂರ್ಣ ಸುಳ್ಳು ಎಂದು ಕೆಎಸ್‌ಟಿಡಿಸಿ ಎಂಪ್ಲಾಯಿಸ್ ಯೂನಿಯನ್ ಸ್ಪಷ್ಟಪಡಿಸಿದೆ. ಈ ಕುರಿತು ಬುಧವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಯೂನಿಯನ್ ಅಧ್ಯಕ್ಷ ಡಿ.ಲಕ್ಷ್ಮೀವೆಂಕಟೇಶ್ ಮಾತನಾಡಿ, ನಮ್ಮ ಸಂಘಟನೆಯ ವಿರುದ್ಧ ಸ್ಪರ್ಧಿಸಿ ಹೀನಾಯ ಸೋಲನುಂಡ ವರ್ಕಸ್ ಯೂನಿಯನ್‌ನ ಅಧ್ಯಕ್ಷರೆನಿಸಿಕೊಂಡ ವ್ಯಕ್ತಿಯೋರ್ವರು ಈ ಎಲ್ಲಾ ಸುಳ್ಳು ಪ್ರಚಾರಗಳಿಗೆ ಕಾರಣಕರ್ತರಾಗಿರುತ್ತಾರೆ ಎಂದು ಆರೋಪಿಸಿದರು. ಪರಾಜಿತ ವರ್ಕಸ್ ಯೂನಿಯನ್ ಅಧ್ಯಕ್ಷರೆನಿಸಿಕೊಂಡ ವ್ಯಕ್ತಿಯು ಕೆಎಸ್‌ಟಿಡಿಸಿ ನಿಗಮದ ಅಧಿಕಾರಿ ವರ್ಗ, ಕಾರ್ಮಿಕರು ಮತ್ತು ಗುತ್ತಿಗೆದಾರರಿಗೆ ಬೆದರಿಕೆ, ಬ್ಲಾಕ್ ಮೇಲ್ ತಂತ್ರಗಳನ್ನು ಬಳಸಿ ಹಣ ವಸೂಲಿ ದಂಧೆಗಳಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಎ.ಬಾಬು ಪೂಜಾರಿ ಮಾತನಾಡಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಆಡಳಿತ ಹಾಗೂ ನೌಕರರ ವಿರುದ್ಧ ಕೆಲವು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಆರೋಪಗಳು ಹಾಗೂ ಅಪಪ್ರಚಾರಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ನ...

ಫೈಲ್‌ನೇಮ್: ಕೆಎಸ್‌ಟಿಡಿಎಸ ಭ್ರಷ್ಟಾಚಾರ ನಡೆದಿದೆ ಎನ್ನುವ ವರದಿ ಸಂಪೂರ್ಣ ಸುಳ್ಳು

Image
 ಫೈಲ್‌ನೇಮ್: ಕೆಎಸ್‌ಟಿಡಿಎಸ ಭ್ರಷ್ಟಾಚಾರ ನಡೆದಿದೆ ಎನ್ನುವ ವರದಿ ಸಂಪೂರ್ಣ ಸುಳ್ಳು ಇತ್ತೀಚಿನ ದಿನಗಳಲ್ಲಿ ಕೆಲವು ಮಾಧ್ಯಮಗಳಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ ವಿವಿಧ ಘಟಕಗಳಲ್ಲಿ ಭ್ರಷ್ಟಾಚಾರ ನಡೆದಿರುವುದಾಗಿ ವರದಿಯಾಗಿರುವುದು ಸಂಪೂರ್ಣ ಸುಳ್ಳು ಎಂಬುದಾಗಿ ಕೆಎಸ್‌ಟಿಡಿಸಿ ಎಂಪ್ಲಾಯಿಸ್ ಯೂನಿಯನ್ ಸ್ಪಷ್ಟೀಕರಣ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಯೂನಿಯನ್ ಅಧ್ಯಕ್ಷ ಡಿ.ಲಕ್ಷ್ಮೀ ವೆಂಕಟೇಶ್ ಮಾತನಾಡಿ, ನಮ್ಮ ಸಂಘಟನೆಯ ವಿರುದ್ಧ ಸ್ಪರ್ಧಿಸಿ ಹೀನಾಯ ಸೋಲನುಂಡ ವರ್ಕಸ್ ಯೂನಿಯನ್‌ನ ಅಧ್ಯಕ್ಷರೆನಿಸಿಕೊಂಡ ವ್ಯಕ್ತಿಯೋರ್ವರು ಈ ಎಲ್ಲಾ ಸುಳ್ಳು ಪ್ರಚಾರಗಳಿಗೆ ಕಾರಣ ಕರ್ತರಾಗಿರುತ್ತಾರೆ ಎಂದು ಆರೋಪಿಸಿದರು. ಪರಾಜಿತ ವರ್ಕಸ್ ಯೂನಿಯನ್ ಅಧ್ಯಕ್ಷರೆನಿಸಿಕೊಂಡ ವ್ಯಕ್ತಿಯು ಕೆಎಸ್‌ಟಿಡಿಸಿ ನಿಗಮದ ಅಧಿಕಾರಿ ವರ್ಗ, ಕಾರ್ಮಿಕರು ಮತ್ತು ಗುತ್ತಿಗೆದಾರರಿಗೆ ಬೆದರಿಕೆ, ಬ್ಲಾಕ್ ಮೇಲ್ ತಂತ್ರಗಳನ್ನು ಬಳಸಿ ಹಣ ವಸೂಲಿ ದಂಧೆಗಳಲ್ಲಿ ತೊಡಗಿರುತ್ತಾರೆ ಎಂದು ತಿಳಿಸಿದರು. ಯೂನಿಯನ್ ಗೌರವಾಧ್ಯಕ್ಷ ಗುರುಪ್ರಸಾದ್, ಪ್ರಧಾನ ಕಾರ್ಯದರ್ಶಿ ಎ.ಬಾಬು ಪೂಜಾರಿ, ಪದಾಧಿಕಾರಿಗಳಾದ ಗೋಪಾಲ್, ಎಸಿ ಗುಂಡಯ್ಯಗೌಡ, ವಿನಯ್, ಲಕ್ಷ್ಮೀಪತಿ ಇತರರಿದ್ದರು.

ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ.

Image
 ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ.   ಬೆಂಗಳೂರು ಸೆಪ್ಟೆಂಬರ್ 8; ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನ 17ನೇ ಪದವಿ ಪ್ರದಾನ ಸಮಾರಂಭ ಇಂದು ನಡೆಯಿತು.  ಆರ್‌ಆರ್‌ಎಮ್‌ ಸಿಎಚ್ ಕ್ಯಾಂಪಸ್ ನ ಎಸಿಎಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ 736 ಪದವೀಧರ ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರ ಪಡೆದರು. ಪದವಿ ಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷ ಡಾ. ಎ.ಸಿ. ಷಣ್ಮುಗಂ,ಇಸ್ರೋ  ವಿಜ್ಞಾನಿ, ಚಂದ್ರಯಾನ ಯೋಜನಾ ನಿರ್ದೇಶಕ ಮತ್ತು ಮಿಷನ್ ಡೈರೆಕ್ಟರ್ ಡಾ. ಪಿ. ವೀರಮುತ್ತುವೇಲ್,ಇನ್ಫೋಸಿಸ್ ಲಿಮಿಟೆಡ್‌ ಸಹಾಯಕ ಉಪಾಧ್ಯಕ್ಷ ವಿಕ್ಟರ್ ಸುಂದರರಾಜ,ವಿಪ್ರೋ ಲಿಮಿಟೆಡ್‌ನ ಜಾಗತಿಕ ಕಾರ್ಯತಂತ್ರದ ನೇಮಕಾತಿ ಮುಖ್ಯಸ್ಥ ಪ್ರವೀಣ್ ಕಾಮತ್ ಪದವಿ ಪ್ರಧಾನ ಮಾಡಿದರು ಪದವೀಧರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಾ. ಎ.ಸಿ. ಷಣ್ಮುಗಂ, ಭವಿಷ್ಯವನ್ನು ಮಹತ್ವಾಕಾಂಕ್ಷೆ, ಜವಾಬ್ದಾರಿ ಮತ್ತು ಸಮಾಜಕ್ಕೆ ಅರ್ಥಪೂರ್ಣ ಕೊಡುಗೆ ನೀಡುವ ಬದ್ಧತೆಯೊಂದಿಗೆ ಎದುರಿಸಬೇಕು,ಯುವ ವೃತ್ತಿಪರರ ಜೀವನ ಮತ್ತು ವೃತ್ತಿಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಪೋಷಕರ ಬೆಂಬಲ ಮತ್ತು ಶಿಕ್ಷಕರ ಮಾರ್ಗದರ್ಶನವನ್ನು ಸ್ಮರಿಸುವ ಅಗತ್ಯವನ್ನು ಅವರು ಒತ್ತು ನೀಡಿದರು. ಪದವೀಧರರು ಕೇವಲ ವೈಯಕ್ತಿಕ ಯಶಸ್ಸನ್ನು ಮಾತ್ರವಲ್ಲದೆ, ದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕವಾದ ಪ್ರಗತಿಯನ್ನು ಸಾ...

ಸಹಕಾರ ಮಹಾಮಂಡಲದ ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ, ಉಪಾಧ್ಯಕ್ಷರಾಗಿ ಬಿ.ಕೆ. ಶಿವಕುಮಾರ್ ಆಯ್ಕೆ

Image
 ಸಹಕಾರ ಮಹಾಮಂಡಲದ ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ, ಉಪಾಧ್ಯಕ್ಷರಾಗಿ ಬಿ.ಕೆ. ಶಿವಕುಮಾರ್ ಆಯ್ಕೆ ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ನೂತನ ಅಧ್ಯಕ್ಷರಾಗಿ  ಶಾಸಕ ಜಿ.ಟಿ ದೇವೇಗೌಡ ಹಾಗೂ ಉಪಾಧ್ಯಕ್ಷರಾಗಿ ಬಿ.ಕೆ. ಶಿವಕುಮಾರ್ ಶುಕ್ರವಾರ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರು ವಿಭಾಗದಿಂದ ಜಿ.ಟಿ. ದೇವೇಗೌಡ, ಬಿ.ಸಿ.ಲೋಕಪ್ಪಗೌಡ, ಬಿ.ಶಶಿಕುಮಾ‌ರ್ ರೈ. ಬೆಂಗಳೂರು ವಿಭಾಗದಿಂದ ಎಚ್.ಎನ್ ಅಶೋಕ, ಬಿ.ಕೆ. ಶಿವಕುಮಾರ್, ಕೆ.ಪಿ. ಚನ್ನಬೈರೇಗೌಡ, ಕೆ. ಸುನೀಲ್, ಬೆಳಗಾವಿ ವಿಭಾಗದಿಂದ ಜಗದೀಶ್ ಎಂ. ಕವಟಗಿಮಠ, ಕಾಶಿಲಿಂಗ ಬಿ. ಹುಡೇದ, ಕೃಷ್ಣಗೌಡ ಪಾಟೀಲ್‌, ಕಲಬುರಗಿ ವಿಭಾಗದಿಂದ ಜೆ.ಎಂ. ಶಿವಪ್ರಸಾದ್, ಅಭಿಷೇಕ ಆರ್. ಪಾಟೀಲ್, ವಿಶ್ವನಾಥರೆಡ್ಡಿ ಎಸ್. ದರ್ಶನಾಪೂರ ಆಯ್ಕೆಯಾಗಿದ್ದಾರೆ. ಇತರೆ ಸಹಕಾರ ಸಂಸ್ಥೆಗಳ ಕ್ಷೇತ್ರದಿಂದ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಚುನಾಯಿತರಾಗಿದ್ದಾರೆ. ಈ ಕುರಿತು ಮಾತನಾಡಿರುವ ಜಿ.ಟಿ ದೇವೇಗೌಡ ಅವರು, ರಾಜ್ಯದ 48 ಸಾವಿರಕ್ಕೂ ಅಧಿಕ ಸಹಕಾರ ಸಂಸ್ಥೆಗಳ ಮಾತೃ ಸಂಸ್ಥೆಯಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಕಳೆದ 102 ವರ್ಷಗಳಿಂದ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಸಹಕಾರ ಮಹಾಮಂಡಳದ ಎಲ್ಲ ಕಾರ್ಯಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ನೀಡುತ್ತಿದೆ. ಸಿಎಂ ಡಿ.ಕೆ. ಶಿವಕುಮಾರ್, ಡಿಸಿಎಂ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರ ಸಚಿವ ಲಕ...

1,000 ಹೊಸ ಆರಂಭಗಳು: ತಲಸೇಮಿಯಾ ಬಾಧಿತ ಮಕ್ಕಳಿಗೆ ಆಶಾಕಿರಣವಾದ DKMS–ಸಂಕಲ್ಪ ಸಹಭಾಗಿತ್ವ

Image
1,000 ಹೊಸ ಆರಂಭಗಳು: ತಲಸೇಮಿಯಾ ಬಾಧಿತ ಮಕ್ಕಳಿಗೆ ಆಶಾಕಿರಣವಾದ DKMS–ಸಂಕಲ್ಪ ಸಹಭಾಗಿತ್ವ 1,000 ಮಕ್ಕಳ ಕಾಂಡಕೋಶ ಕಸಿ ಮೈಲಿಗಲ್ಲು ಸಾಧನೆ; ಸೆಪ್ಟೆಂಬರ್ 5ರಂದು ಬೆಂಗಳೂರಿನಲ್ಲಿ ವಿಶೇಷ ಆಚರಣೆ ಬೆಂಗಳೂರು, ಸೆಪ್ಟೆಂಬರ್ 4, 2026: ತಲಸೇಮಿಯಾ ಸೇರಿದಂತೆ ತೀವ್ರ ಅನುವಂಶಿಕ ರಕ್ತ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲೊಂದು ದಾಖಲಾಗಿದೆ. ಸಂಕಲ್ಪ ಇಂಡಿಯಾ ಫೌಂಡೇಶನ್ 1,000 ಮಕ್ಕಳಿಗೆ ಸ್ಟೆಮ್ ಸೆಲ್ ಟ್ರಾನ್ಸ್‌ಪ್ಲಾಂಟೇಶನ್ (ಕಾಂಡಕೋಶ ಕಸಿ) ಯಶಸ್ವಿಯಾಗಿ ನೆರವೇರಿಸಿದ್ದು, ಸಾವಿರಾರು ಕುಟುಂಬಗಳ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಈ ಸಾಧನೆಯನ್ನು “1,000 ಹೊಸ ಆರಂಭಗಳು” ಎಂಬ ಪರಿಕಲ್ಪನೆಯಡಿ ಸೆಪ್ಟೆಂಬರ್ 5ರಂದು ಬೆಂಗಳೂರಿನಲ್ಲಿ ಆಚರಿಸಲಾಗುತ್ತಿದೆ. ಸಂಕಲ್ಪ ಇಂಡಿಯಾ ಫೌಂಡೇಶನ್, ಅಂತಾರಾಷ್ಟ್ರೀಯ ಲಾಭರಹಿತ ಸಂಸ್ಥೆ DKMS ಹಾಗೂ ವೈದ್ಯಕೀಯ ಮತ್ತು ಜ್ಞಾನ ಪಾಲುದಾರ ಸಂಸ್ಥೆ ಕ್ಯೂರ್2ಚಿಲ್ಡ್ರನ್ ಫೌಂಡೇಶನ್ ನಡುವಿನ ದಶಕಕ್ಕೂ ಅಧಿಕ ಕಾಲದ ಸಹಭಾಗಿತ್ವದ ಪ್ರಮುಖ ಸಾಧನೆಯಾಗಿ ಈ ಮೈಲಿಗಲ್ಲು ಗುರುತಿಸಿಕೊಂಡಿದೆ. ತೀವ್ರ ತಲಸೇಮಿಯಾದಿಂದ ಬಳಲುತ್ತಿರುವ ಮಕ್ಕಳಿಗೆ ನಿಯಮಿತ ರಕ್ತಪೂರಣ ಮತ್ತು ದೀರ್ಘಕಾಲದ ಚಿಕಿತ್ಸೆಯ ಅವಲಂಬನೆಯಿಂದ ಹೊರಬಂದು ಆರೋಗ್ಯಕರ ಜೀವನ ನಡೆಸುವ ಅವಕಾಶವನ್ನು ಈ ಟ್ರಾನ್ಸ್‌ಪ್ಲಾಂಟೇಶನ್ ಕಾರ್ಯಕ್ರಮ ಒದಗಿಸುತ್ತಿದೆ. 820ಕ್ಕೂ ಹೆಚ್ಚು ಮಕ್ಕಳ ಚಿಕಿತ್ಸೆಗೆ DK...

ಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ, ಪ್ರಾಮಾಣಿಕವಾಗಿ ಆಯ್ಕೆಯಾದ ಪಶುವೈದ್ಯಾಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿ ಎಂದು ಮನವಿ*

Image
 *ಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ, ಪ್ರಾಮಾಣಿಕವಾಗಿ ಆಯ್ಕೆಯಾದ ಪಶುವೈದ್ಯಾಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿ ಎಂದು ಮನವಿ* ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಪಶುವೈದ್ಯಾಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಸಮಿತಿ ವತಿಯಿಂದ ಮಾಧ್ಯಮಗೋಷ್ಠಿ ಏರ್ಪಡಿಸಿದ್ದರು. ಡಾ||ಹನುಂತಪ್ಪ ಕಳಾಸಪುರ, ಡಾ.ಗುರುಬಸವರಾಜ್, ಡಾ.ಪೂಜ್.ಹೆಚ್., ಡಾ.ಅವಿನಾಶ್ ಬಿರಡಿ, ಡಾ.ಸುನೀಲ್,ಡಾ.ಚಾಂದಿನಿ.ಎನ್.ಡಾ.ಶ್ರೀಶೈಲ್, ಡಾ.ತನ್ವಿತ್, ಡಾ.ಪ್ರಿಯಾಂಕ, ಡಾ.ವಿಕಾಸ್ ರವರು ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಡಾ||ಹನುಮಂತಪ್ಪ ಕಳಸಾಪುರರವರು ಮಾತನಾಡಿ ರಾಜ್ಯ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆ ಸೇವೆಗಳು ಅತ್ಯಂತ ಅಗತ್ಯ ಸೇವೆಗಳು ಆಗಿದೆ. ಇತ್ತಿಚೇಗೆ 329 ಪಶುವೈದ್ಯಾಧಿಕಾರಿ ಪೈಕಿ 29ಪಶುವೈದ್ಯಾಧಿಕಾರಿ ಮೇಲೆ ಪರೀಕ್ಷೆಯಲ್ಲಿ ವಂಚನೆ, ಕಾಪಿ ಮಾಡಿ ಆಯ್ಕೆಯಾಗಿದ್ದಾರೆ ಎಂದು ಸಿಐಡಿ ಎಫ್.ಐ.ಆರ್.ದಾಖಲಿಸಿದ್ದಾರೆ. ಸುಪ್ರಿಂಕೋರ್ಟ್ ನಲ್ಲಿ ಹಲವಾರು ಪ್ರಕರಣದಲ್ಲಿ ಕಳಂಕಿತರ ಮೇಲೆ ಕ್ರಮ ಮತ್ತು ಪ್ರಾಮಾಣಿಕ ಪಾಸಾದ ಅಭ್ಯರ್ಥಿಗಳಿಗೆ ನೇಮಕಾತಿ ಮಾಡಿ ಎಂದು ತೀರ್ಪು ನೀಡಿದ್ದಾರೆ ಅದೇ ಮಾದರಿಯಲ್ಲಿ ಇಲ್ಲಿ ಕ್ರಮ ಕೈಗೊಳ್ಳಿ ಕಳಂಕಿತರ ಮೇಲೆ ಕ್ರಮ ನಮಗೆ ನೇಮಕಾತಿ ಆದೇಶ ಪತ್ರ ನೀಡಿ. ಸಿಐಡಿ ಕಛೇರಿ ನಮ್ಮನ್ನ ಕರೆದರೆ ಹೋಗುತ್ತೇವೆ ನಮಗೆ ಯಾವುದೇ ಆಳುಕಿಲ್ಲ, ಭಯವಿಲ್ಲ. ನಾವು ತನಿಖೆಯನ್ನ ವಿರೋಧಿಸುವುದಿಲ್ಲ. ವಿನಾ...

ಬಿಷಪ್ ಕಾಟನ್ ಮಹಿಳಾ ಕಾಲೇಜಿನಲ್ಲಿ ಎಸ್‌ಐಆರ್ ಹಂತ-2 ತರಬೇತಿ ಶಿಬಿರ

Image
 ಬಿಷಪ್ ಕಾಟನ್ ಮಹಿಳಾ ಕಾಲೇಜಿನಲ್ಲಿ ಎಸ್‌ಐಆರ್ ಹಂತ-2 ತರಬೇತಿ ಶಿಬಿರ     ಆಗಸ್ಟ್ 28  : ಜಯನಗರ ವಿಧಾನಸಭಾ ಕ್ಷೇತ್ರದ ಎಸ್‌ಐಆರ್ ಹಂತ-2 ರ ತರಬೇತಿ ಶಿಬಿರವನ್ನು ಬಿಷಪ್ ಕಾಟನ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.  ಈ ಕಾರ್ಯಕ್ರಮದಲ್ಲಿ ಬಿಎಲ್‌ಒ, ಬಿಎಲ್‌ಒ ಮೇಲ್ವಿಚಾರಕರು, ಎಇಆರ್‌ಒ ಹಾಗೂ ಇಆರ್‌ಒ ಅಧಿಕಾರಿಗಳು ಭಾಗವಹಿಸಿದ್ದರು.  ಸೌತ್ ಸಿಟಿ ಕಾರ್ಪೊರೇಷನ್‌ನ ಎಲೆಕ್ಷನ್ ತಹಶೀಲ್ದಾರ್ ರಶ್ಮಿ, ಕಂದಾಯಾಧಿಕಾರಿ ಈಶ್ವರ್ ಎಸ್ ರಾಯುಡು ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಈ ತರಬೇತಿ ಕಾರ್ಯಕ್ರಮದ ನೇತೃತ್ವ ವಹಿಸಿ ಅಗತ್ಯ ಮಾರ್ಗದರ್ಶನಗಳನ್ನು ನೀಡಿದರು.  ಹೊಸ ಮತದಾರರನ್ನು ಹೊರಗುಳಿಯದಂತೆ ಹಾಗೂ ಅನರ್ಹ ಮತದಾರರು ಸೇರ್ಪಡೆಯಾಗದಂತೆ ತಡೆದು ಸರಿಯಾದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ನಮ್ಮ ಉದ್ದೇಶವಾಗಿದೆ,ಪ್ರತಿಯೊಬ್ಬ ವಿದ್ಯಾರ್ಥಿ,ವಯೋಮಿತಿ ಅರ್ಹ ಹೊಂದಿರುವವರು ಮತದಾನದಾನದಿಂದ ದೂರ ಉಳಿಯದಂತೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.  ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುನೀಲ್ ಕುಮಾರಿ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಹೇಮಲತಾ,ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳು, ನೌಕರರು ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದರು.