Posts

ಕೆ. ವಿ.ಅಮರ್‌ನಾಥ್‌ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲು ಮಡಿವಾಳರ ಆಗ್ರಹ.

Image
 ಕೆ. ವಿ.ಅಮರ್‌ನಾಥ್‌ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲು ಮಡಿವಾಳರ ಆಗ್ರಹ. ಬೆಂಗಳೂರು ಜೂನ್ 6; ಮಡಿವಾಳ ಸಮುದಾಯದ ಪ್ರಮುಖರಾದ ಶ ಕೆ. ವಿ. ಅಮರನಾಥ್ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಮಾಡುವಂತೆ ರಾಜ್ಯ ಮಡಿವಾಳರ ಸಂಘ ಆಗ್ರಹಿಸಿದೆ.  ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸಿ.ನಂಜಪ್ಪ, ಪ್ರಧಾನ ಕಾರ್ಯದರ್ಶಿ ಜಿ.ಆರ್.ಪ್ರಕಾಶ್, ಉಪಾಧ್ಯಕ್ಷ ರಾಜಣ್ಣ,ಮಡಿವಾಳ ಸಮುದಾಯದ ಸಮಾಜದ ಸೇವೆ ಮಾಡುತ್ತಾ ಮತ್ತು ಸಮಾಜದ ಅನೇಕ ಸಮಾವೇಶಗಳಿಗೆ ಆರ್ಥಿಕ ಸಹಾಯ, ಸಂಘಟನೆ ಮಾಡುತ್ತಾ ಬಂದಿದ್ದಾರೆ. ಕೆ. ವಿ. ಅಮರ್‌ನಾಥ್ ಅವರು ಮಡಿವಾಳ ಸಮುದಾಯದ ಯಾವುದೇ ಸಮಸ್ಯೆಗೂ ಸ್ಪಂದಿಸಿ ನೆರವಾಗುವ ಮೂಲಕ ಸಮುದಾಯದ ಮುಂಚೂಣಿಯ ನಾಯಕರಾಗಿದ್ದಾರೆ. ಸಮಾಜ ಸೇವೆ ಮಾಡುವ ಉದ್ದೇಶದಿಂದ ರಾಜಕೀಯ ಕ್ಷೇತ್ರಕ್ಕೆ ಬಂದು ಇವರು ಕಾಂಗ್ರೆಸ್ ಪಕ್ಷವನ್ನು ಸೇರಿ ಪಕ್ಷವನ್ನು ಸಂಘಟನೆ ಮಾಡಿ ತುಮಕೂರಿನಲ್ಲಿ ಕರ್ನಾಟಕ ರಾಜ್ಯ ಮಡಿವಾಳರ ಬೃಹತ್ ಜನ ಜಾಗೃತಿ ಸಮಾವೇಶವನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮಾಡಿಸಿದರು ಎಂದರು. ಸಮಾಜ ಸೇವೆ ಎನ್ನುವುದು ಕೆ. ವಿ. ಅಮರ್‌ನಾಥ್ ರವರ ರಕ್ತದಲ್ಲಿ ಬೆರೆತು ಹೋಗಿದೆ. ನೊಂದು ಬಂದವರನ್ನು ಯಾವತ್ತು ಬರಿಗೈಯಲ್ಲಿ ಕಳಿಸಿದವರಲ್ಲ. ಹಾಗೆಯೇ ಬದುಕಿನಲ್ಲಿ ನೂರಾರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಸಹಾಯ ಮಾಡಿದ್ದಾರೆ. ಅನೇಕ ಜಿಲ್ಲೆಗಳಲ್ಲಿ ಸಮು...

ಕರ್ನಾಟಕ ರಾಜಕಾರಣಕ್ಕೆ ವಿಐಪಿ ಎಂಟ್ರಿ” 70 ಕ್ಷೇತ್ರಗಳಲ್ಲಿ ಸ್ಪರ್ಧೆಯ ಎಚ್ಚರಿಕೆ

Image
  ಕರ್ನಾಟಕ ರಾಜಕಾರಣಕ್ಕೆ ವಿಐಪಿ ಎಂಟ್ರಿ” 70 ಕ್ಷೇತ್ರಗಳಲ್ಲಿ ಸ್ಪರ್ಧೆಯ ಎಚ್ಚರಿಕೆ ಬೆಂಗಳೂರು, ಜೂನ್ 5: ಅತಿ ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯವನ್ನು ಹೆಚ್ಚಿಸುವ ಉದ್ದೇಶದಿಂದ ವಿಕಾಸಶೀಲ ಇನ್ಸಾನ್ ಪಾರ್ಟಿ (VIP) ಕರ್ನಾಟಕ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ. ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ. ಮಾತನಾಡಿ, ಕೋಲಿ, ಗಂಗಾಮತ, ಬೆಸ್ತ ಸೇರಿದಂತೆ ಹಲವು ಹಿಂದುಳಿದ ಸಮುದಾಯಗಳ ಜನಸಂಖ್ಯೆ ಲಕ್ಷಾಂತರದಲ್ಲಿದ್ದರೂ, ವಿಧಾನಸಭೆಯಲ್ಲಿ ಸಮರ್ಪಕ ಪ್ರತಿನಿಧಿತ್ವ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಮುಖ ರಾಜಕೀಯ ಪಕ್ಷಗಳು ಹಿಂದುಳಿದ ವರ್ಗಗಳನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿವೆ ಎಂದು ಆರೋಪಿಸಿದರು. ಮಹರ್ಷಿ ವಾಲ್ಮೀಕಿ, ಬಸವಣ್ಣ, ಬುದ್ಧ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳ ಆಧಾರದಲ್ಲಿ ಪಕ್ಷವನ್ನು ಕಟ್ಟಲಾಗುತ್ತಿದೆ ಎಂದು ತಿಳಿಸಿದ ಅವರು, ಅತಿ ಹಿಂದುಳಿದ ಹಾಗೂ ಅಲೆಮಾರಿ ಸಮುದಾಯಗಳನ್ನು ಒಗ್ಗೂಡಿಸಿ ರಾಜಕೀಯ ಶಕ್ತಿ ನಿರ್ಮಿಸುವ ಗುರಿ ಹೊಂದಿದ್ದೇವೆ ಎಂದರು. ಮುಂಬರುವ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ನ್ಯಾಯ ಸಿಗದಿದ್ದರೆ, ಪಕ್ಷ ಪ್ರಬಲವಾಗಿರುವ 60 ರಿಂದ 70 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಎಚ್ಚರಿಕೆ ನೀಡಿದರು. ಗೆಲ್ಲದಿದ್ದರೂ ಫಲಿತಾಂಶದ ಮೇಲೆ ಪ್ರಭಾವ ಬೀರುವ ಶಕ್ತಿ ನಮ್ಮಲ್ಲಿದೆ ಎಂದು ಹೇಳಿದರು. ಬಿಹಾರದಲ್ಲಿ ವಿಐಪಿ ಸಾಧಿಸಿರುವ ಯಶಸ್ಸ...

ಸಂತೋಷ್‌ ಲಾಡ್‌, ಶ್ರೀನಿವಾಸ ಮಾನೆ ಅವರುಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ: ಮರಾಠ ಸಮುದಾಯದ ಒತ್ತಾಯ...

Image
 ಸಂತೋಷ್‌ ಲಾಡ್‌, ಶ್ರೀನಿವಾಸ ಮಾನೆ ಅವರುಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ: ಮರಾಠ ಸಮುದಾಯದ ಒತ್ತಾಯ... ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆ ಮಾರಾಟ ಸಮಾಜ ಅಭಿನಂದನೆ ಸಲ್ಲಿಸುತ್ತಿದ್ದು, ಹೊಸ ಸಂಪುಟದಲ್ಲಿ ಶಾಸಕರಾದ ಸಂತೋಷ್‌ ಲಾಡ್‌ ಮತ್ತು ಶ್ರೀನಿವಾಸ ಮಾನೆ ಅವರುಗಳಿಗೆ ಸ್ಥಾನವನ್ನು ನೀಡಬೇಕು ಎಂದು ಸಕಲ ಮರಾಠ ಸಮಾಜದಿಂದ ಒತ್ತಾಯಿಸಲಾಯಿತು. ಈ ಕುರಿತು ಬುಧವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಕಲ ಮರಾಠ ಸಮಾಜದ ಅಧ್ಯಕ್ಷ ರವಿಶಂಕರ್ ಮೆಹಡಿಕ್ ಮರಾಠ, ನಮ್ಮ ಸಮುದಾಯಕ್ಕೆ ಸೇರಿದ ಸಂತೋಷ್ ಲಾಡ್ ಜನಪ್ರಿಯತೆ ಸಾಕಷ್ಟು ಇದ್ದು, ಕಾರ್ಯಕ್ಷಮತೆ, ದಕ್ಷತೆ ಪರಿಗಣಿಸಿ ಈ ಹಿಂದಿನ ಬಹುತೇಕ ಸರ್ಕಾರಗಳು ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವರನ್ನಾಗಿ ನೇಮಕ ಮಾಡಿ ಸಮಾಜದ ಸೇವೆಗಾಗಿ ನಿಯೋಜನೆ ಮಾಡಿದ್ದಾರೆ. ಲಾಡ್ ರಾಜ್ಯಮಟ್ಟದ ನಾಯಕರಾಗಿದ್ದು ಮರಾಠ ಸಮುದಾಯ ಮಾತ್ರವಲ್ಲದೆ ಜಾತ್ಯಾತೀತ ನೇತಾರರಾಗಿದ್ದಾರೆ. ಹಿಂದಿನ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿ ಎಲ್ಲಾ ಕಾರ್ಮಿಕರ ಸಮಸ್ಯೆಗಳಿಗೆ, ಕ್ಷೇಮಾಭಿವೃದ್ಧಿಗೆ, ವಿಕಲಾಂಗರಿಗೆ ಅನುಕೂಲವಾಗುವಂತಹ ಹತ್ತು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು. ರಾಜ್ಯಾದ್ಯಂತ ಸುಮಾರು 40 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಮರಾಠ ಸಮುದಾಯ ಹೊಂದಿದ್ದು,   ಪ್ರಮುಖ ನಾಯಕರಾದ ಸಂತೋಷ್ ಲಾಡ...

ವಿಜ್ಞಾನವನ್ನು ಸರಳ ಕನ್ನಡದಲ್ಲಿ ತಲುಪಿಸುವ ಕೆಲಸವಾಗಬೇಕಿದೆ: ಪ್ರೊ. ಎಚ್. ಎಸ್. ರಾಘವೇಂದ್ರ ರಾವ್

Image
 ವಿಜ್ಞಾನವನ್ನು ಸರಳ ಕನ್ನಡದಲ್ಲಿ ತಲುಪಿಸುವ ಕೆಲಸವಾಗಬೇಕಿದೆ: ಪ್ರೊ. ಎಚ್. ಎಸ್. ರಾಘವೇಂದ್ರ ರಾವ್ ಬೆಂಗಳೂರು: ವಿಜ್ಞಾನವನ್ನು ಸರಳ ಕನ್ನಡದಲ್ಲಿ ತಲುಪಿಸುವ ಕೆಲಸವಾಗಬೇಕಿದೆ. ಈ ಕುರಿತು ಸರಳಗನ್ನಡದಲ್ಲಿ ವಿಜ್ಞಾನದ ವಿಚಾರಗಳನ್ನು ತಲುಪಿಸುವ ಕೆಲಸಕ್ಕೆ ಯುವ ಜನರು ಪ್ರಯಾಣಿಸಬೇಕು ಎಂದು ವಿಮರ್ಶಕ ಪ್ರೊ. ಎಚ್. ಎಸ್. ರಾಘವೇಂದ್ರ ರಾವ್ ತಿಳಿಸಿದರು. ಮಂಗಳವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ನೃಪತುಂಗ ವಿಶ್ವವಿದ್ಯಾಲಯದ ಎರಡನೇ ಮತ್ತು ಮೂರನೇ ವರ್ಷದ ಘಟಿಕೋತ್ಸವ ಸಮಾರಂಭದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ಯುವ ಜನರು ವಿಜ್ಞಾನವನ್ನು ಇಂಗ್ಲೀಷನ್ ನಲ್ಲಿಯೇ ಕಲಿತರೂ ಕನ್ನಡಿಗರಿಗಾಗಿ ವಿಜ್ಞಾನವನ್ನು ತಲುಪಿಸುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಕೆಲವು ವಿದ್ಯಾರ್ಥಿಗಳು ಪ್ರಯತ್ನ ಪಟ್ಟರೂ ಸಹ ಉತ್ತಮ ಪರಿಣಾಮ ಬೀರಲಿದೆ. ಕನ್ನಡದಲ್ಲಿ ವಿಜ್ಞಾನವನ್ನು ತಲುಪಿಸಿದರೆ ಎಲ್ಲರಿಗೂ ಅರ್ಥವಾಗುವ ಜತೆಗೆ ಅಳವಡಿಸಿಕೊಳ್ಳಲು ಸಹಾಯವಾಗಲಿದೆ ಎಂದರು. ವಿಜ್ಞಾನವನ್ನು ಇಲ್ಲಿಯವರೆಗೂ ಪಾಶ್ಚಾತ್ಯ ನೆಲೆಗಟ್ಟಿನಲ್ಲಿಯೇ ನೋಡಲಾಗಿದೆ. ಆದ್ದರಿಂದ ವಿಜ್ಞಾನ ಮತ್ತು ಭಾರತೀಯ ಪರಂಪರೆಯ ಅಮೂರ್ತ ಚಿಂತನೆಯಾಗಬೇಕಿದೆ. ಇಂದು ಮೂಲ ವಿಜ್ಞಾನ, ಭೌತ ವಿಜ್ಞಾನವನ್ನು ಬಿಟ್ಟು ಎಲ್ಲರೂ ತಂತ್ರಜ್ಞಾನದ ಹಿಂದೆ ಬಿದ್ದಿದ್ದಾರೆ. ಆದರೆ ವಿಜ್ಞಾವಿಲ್ಲದೆ, ತಂತ್ರಜ್ಞಾನವಿಲ್ಲ, ತಂತ್ರಜ್ಞಾನದ ಮೂಲ ಬೇರು ವಿಜ್ಞಾನ ಎಂಬುದನ್ನು ಅರಿತುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ...

ಸಚಿವ ಸ್ಥಾನ ಕೊಡದೇ ಹೋದರೆ ಕಾಂಗ್ರೆಸ್ ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ರಾಜೀನಾಮೆ ಎಚ್ಚರಿಕೆ*

Image
 *ಸಚಿವ ಸ್ಥಾನ ಕೊಡದೇ ಹೋದರೆ ಕಾಂಗ್ರೆಸ್ ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ರಾಜೀನಾಮೆ ಎಚ್ಚರಿಕೆ* 😂 *ಶಾಸಕ ವಿಜಯಾನಂದ್ ಎಸ್.ಕಾಶಪ್ಪನವರ್ ಸಚಿವ ಸ್ಥಾನ ನೀಡಿ ಎಂದು ಒತ್ತಾಯಿಸಿ-ಇಲಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಒತ್ತಾಯ* ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಇಲಕಲ್, ಹುನಗುಂದ್ ಮತಕ್ಷೇತ್ರ, ಬಾಗಲಕೋಟೆ ಜಿಲ್ಲೆ  ವತಿಯಿಂದ ಹುನಗುಂದ್ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಜಯಾನಂದ್ ಎಸ್.ಕಾಶಪ್ಪನವರ್ ನೂತನ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಮಾಧ್ಯಮಗೋಷ್ಠಿ ಏರ್ಪಡಿಸಿದ್ದರು. ಇಲಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ತಟಗಾರ , ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ವಿಶ್ವನಾಥಪಾಟೀಲ್, ಮಲ್ಲಣ್ಣ ಎಲೆಗಾರ , ಅಮರೇಶ್ ನಾಗೂರ್, , ಮುತ್ತಣ್ಣ ಕಲಗುಡಿ, ಮಹಾಂತೇಶ್ ನರಗುಂದ, ರವಿ ಹುಚ್ಚನೂರು, ಶಾಂತಣ್ಣರಾಘವೇಂದ್ರ ಧಾರವಾಡ, ಮೌನೇಶ್ ಬಂಡಿವಡ್ಡರ್, ನೀಲಪ್ಪ ಅಸೋಲಿ, ವಿಠ್ಠಲ್ ಜಕ್ಕ, ಸಿದ್ದ ಭಧ್ರಶೆಟ್ಟಿ,   ಮನು ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದರು.  *ಅಬ್ದುಲ್ ರಜಾಕ್ ತಟಗಾರರವರು* ಮಾತನಾಡಿ ವಿಜಯಾನಂದ್ ಎಸ್.ಕಾಶಪ್ಪನವರ್ ಅವರ ಕುಟುಂಬ ಕಳೆದ 50ವರ್ಷಗಳಿಂದ ಮನೆತನ ನಿಷ್ಠೆಯಿಂದ ಇದೆ.  ಕಾಂಗ್ರೆಸ್ ಪಕ್ಷದಲ್ಲಿ ನಿಷ್ಟಾವಂತ ಕುಟುಂಬ ಎಂಬ ಕೀರ್ತಿ, ಹೆಗ್ಗಳಿಕೆ ಪಡೆದಿದೆ. ಯುವ ನಾಯಕ, ಕ್ರಿಯಾಶೀಲರಾಗಿ...

ಅಟ್ಲಾಂಟಿಕ್ ಸಮುದ್ರ ಈಜಿ ದಾಖಲೆ ನಿರ್ಮಿಸಿದ ಅನನ್ಯ ಪ್ರಸಾದ್ ಗೆ ಅಭಿನಂದನೆ

Image
 ಅಟ್ಲಾಂಟಿಕ್ ಸಮುದ್ರ ಈಜಿ ದಾಖಲೆ ನಿರ್ಮಿಸಿದ ಅನನ್ಯ ಪ್ರಸಾದ್ ಗೆ ಅಭಿನಂದನೆ   ಬೆಂಗಳೂರು: 52ದಿನಗಳಲ್ಲಿ ಅಟ್ಲಾಂಟಿಕ್ ಸಮುದ್ರದ ಮೂರು ಸಾವಿರ ಕಿಲೋಮೀಟರ್ ಕ್ರಮಿಸಿದ ಅಪರೂಪದ ದಾಖಲೆ ನಿರ್ಮಿಸಿರುವ ರಾಷ್ಟಕವಿ ಜಿ.ಎಸ್. ಶಿವರುದ್ರಪ್ಪ ಅವರ ಮೊಮ್ಮಗಳು ಕುಮಾರಿ ಅನನ್ಯ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭವನ್ನು ದಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಮುಖ್ಯ ಆಯುಕ್ತರಾದ ಡಾ.ಪಿ.ಜಿ.ಆರ್.ಸಿಂದ್ಯಾ, ಸಹಾಯಕ ಆಯುಕ್ತ ಮೋಹನ್ ಕುಮಾರ್ ಕೊಂಡಜ್ಜಿ, ದೂರದರ್ಶನದ ನಿವೃತ್ತ ಸಹಾಯಕ ನಿರ್ದೇಶಕಿ ಡಾ.ನಿರ್ಮಲಾ ಸಿ.ಯಲಿಗಾರ್, ಸ್ಕೌಟ್ ಅಂಡ್ ಗೈಡ್ಸ್ ರಾಜ್ಯ ಆಯುಕ್ತೆ ಗೀತಾ ನಟರಾಜ್ ಕಾರ್ಯಕ್ರಮ ಉದ್ಘಾಟಿಸಿ ಅನನ್ಯ ಪ್ರಸಾದ್ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಪಿಜಿಆರ್ ಸಿಂದ್ಯಾ ಮಾತನಾಡಿ, ಅನನ್ಯ ಪ್ರಸಾದ್ ಅವರು ಕೇವಲ 52 ದಿನಗಳಲ್ಲಿ ಅಟ್ಲಾಂಟಿಕ್ ಸಮುದ್ರವನ್ನು ದಾಟಿ ಭಾರತಕ್ಕೆ ಕೀರ್ತಿ ತಂದಿದ್ದಾರೆ ಇಂತಹವರನ್ನು ಸನ್ಮಾನಿಸಿ ಅಭಿನಂದಿಸುತ್ತಿರುವುದು ಶ್ಲಾಘನೀಯ, ವಿಶೇಷವಾಗಿ ರಾಷ್ಟಕವಿ ಶಿವರುದ್ರಪ್ಪ ಅವರ ಮೊಮ್ಮಗಳಾಗಿ ಇಂತಹ ಸಾಧನೆ ಮಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಹೇಳಿದರು. ನಿರ್ಮಲಾ ಸಿ.ಯಲಿಗಾರ್ ಮಾತನಾಡಿ, ಜಿ.ಎಸ್.ಶಿವರುದ್ರಪ್ಪ ನವರ ಸಾಹಿತ್ಯ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮೇರು ಸಾಹಿತ್ಯವಾಗಿದೆ. ಅವರ ಕುಡಿ ಇಂತಹ...

ಉಪ್ಪಾರ ಸಮಾಜದ ಏಕೈಕ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು: ಸುನೀಲ್ ಕುಮಾರ್ ಎನ್...

Image
 ಉಪ್ಪಾರ ಸಮಾಜದ ಏಕೈಕ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು: ಸುನೀಲ್ ಕುಮಾರ್ ಎನ್... ಬೆಂಗಳೂರು: ಉಪ್ಪಾರ ಸಮಾಜದ ಏಕೈಕ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಾಗಿದ್ದಾರೆ. ಅವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಲೇಬೇಕು ಎಂದು ಬೆಂಗಳೂರು ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಮತ್ತು ಕೆ.ಪಿ.ಸಿ.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಎನ್ ಒತ್ತಾಯಿಸಿದರು. ಶನಿವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿರುವ ಆಯ್ಕೆಯಾಗಿರುವ ಹಿರಿಯ ಜನನಾಯಕ ಹಾಗೂ ಮುಖಂಡ ಪುಟ್ಟರಂಗಶೆಟ್ಟಿ ಅವರು ರಾಜ್ಯ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗದ ಪ್ರಮುಖ ಸಮುದಾಯವಾದ ಉಪ್ಪಾರ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಅವರು ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರೂ ಕೂಡ ಆಗಿದ್ದು, ಇದನ್ನು ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಪರಿಗಣಿಸಬೇಕು ಎಂದು ಆಗ್ರಹಿಸಿದರು. ಶಾಸಕ ಪುಟ್ಟರಂಗಶೆಟ್ಟಿ ದೀರ್ಘಕಾಲದಿಂದ ಜನಸೇವೆ, ಪಕ್ಷ ಸಂಘಟನೆ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ನಿಸ್ವಾರ್ಥವಾಗಿ ದುಡಿಯುತ್ತಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಜನರಿಂದ ಆಶೀರ್ವಾದ ಪಡೆದಿರುವುದು ಅವರ ಅಪಾರ ಜನಸೇವೆಗೆ ಮತ್ತು ಜನಪ್ರಿಯತೆಗೆ ಸಾಕ್ಷಿಯಾಗಿದೆ. ಇಡೀ ಹಿಂದುಳಿದ ವರ್ಗದ ನಾಯಕರಾಗಿ ಸಮಾಜದ ಪರವಾಗಿ ಸದಾ ಧ್ವನಿಯಾಗಿದ್ದಾರೆ. ಅವರಿಗೆ ಸಚಿವ ...