ಬಿಷಪ್ ಕಾಟನ್ ಮಹಿಳಾ ಕಾಲೇಜಿನಲ್ಲಿ ಎಸ್ಐಆರ್ ಹಂತ-2 ತರಬೇತಿ ಶಿಬಿರ
ಬಿಷಪ್ ಕಾಟನ್ ಮಹಿಳಾ ಕಾಲೇಜಿನಲ್ಲಿ ಎಸ್ಐಆರ್ ಹಂತ-2 ತರಬೇತಿ ಶಿಬಿರ ಆಗಸ್ಟ್ 28 : ಜಯನಗರ ವಿಧಾನಸಭಾ ಕ್ಷೇತ್ರದ ಎಸ್ಐಆರ್ ಹಂತ-2 ರ ತರಬೇತಿ ಶಿಬಿರವನ್ನು ಬಿಷಪ್ ಕಾಟನ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಿಎಲ್ಒ, ಬಿಎಲ್ಒ ಮೇಲ್ವಿಚಾರಕರು, ಎಇಆರ್ಒ ಹಾಗೂ ಇಆರ್ಒ ಅಧಿಕಾರಿಗಳು ಭಾಗವಹಿಸಿದ್ದರು. ಸೌತ್ ಸಿಟಿ ಕಾರ್ಪೊರೇಷನ್ನ ಎಲೆಕ್ಷನ್ ತಹಶೀಲ್ದಾರ್ ರಶ್ಮಿ, ಕಂದಾಯಾಧಿಕಾರಿ ಈಶ್ವರ್ ಎಸ್ ರಾಯುಡು ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಈ ತರಬೇತಿ ಕಾರ್ಯಕ್ರಮದ ನೇತೃತ್ವ ವಹಿಸಿ ಅಗತ್ಯ ಮಾರ್ಗದರ್ಶನಗಳನ್ನು ನೀಡಿದರು. ಹೊಸ ಮತದಾರರನ್ನು ಹೊರಗುಳಿಯದಂತೆ ಹಾಗೂ ಅನರ್ಹ ಮತದಾರರು ಸೇರ್ಪಡೆಯಾಗದಂತೆ ತಡೆದು ಸರಿಯಾದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ನಮ್ಮ ಉದ್ದೇಶವಾಗಿದೆ,ಪ್ರತಿಯೊಬ್ಬ ವಿದ್ಯಾರ್ಥಿ,ವಯೋಮಿತಿ ಅರ್ಹ ಹೊಂದಿರುವವರು ಮತದಾನದಾನದಿಂದ ದೂರ ಉಳಿಯದಂತೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುನೀಲ್ ಕುಮಾರಿ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಹೇಮಲತಾ,ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳು, ನೌಕರರು ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದರು.