ಸಹಕಾರ ಮಹಾಮಂಡಲದ ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ, ಉಪಾಧ್ಯಕ್ಷರಾಗಿ ಬಿ.ಕೆ. ಶಿವಕುಮಾರ್ ಆಯ್ಕೆ
ಸಹಕಾರ ಮಹಾಮಂಡಲದ ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ, ಉಪಾಧ್ಯಕ್ಷರಾಗಿ ಬಿ.ಕೆ. ಶಿವಕುಮಾರ್ ಆಯ್ಕೆ ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ನೂತನ ಅಧ್ಯಕ್ಷರಾಗಿ ಶಾಸಕ ಜಿ.ಟಿ ದೇವೇಗೌಡ ಹಾಗೂ ಉಪಾಧ್ಯಕ್ಷರಾಗಿ ಬಿ.ಕೆ. ಶಿವಕುಮಾರ್ ಶುಕ್ರವಾರ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರು ವಿಭಾಗದಿಂದ ಜಿ.ಟಿ. ದೇವೇಗೌಡ, ಬಿ.ಸಿ.ಲೋಕಪ್ಪಗೌಡ, ಬಿ.ಶಶಿಕುಮಾರ್ ರೈ. ಬೆಂಗಳೂರು ವಿಭಾಗದಿಂದ ಎಚ್.ಎನ್ ಅಶೋಕ, ಬಿ.ಕೆ. ಶಿವಕುಮಾರ್, ಕೆ.ಪಿ. ಚನ್ನಬೈರೇಗೌಡ, ಕೆ. ಸುನೀಲ್, ಬೆಳಗಾವಿ ವಿಭಾಗದಿಂದ ಜಗದೀಶ್ ಎಂ. ಕವಟಗಿಮಠ, ಕಾಶಿಲಿಂಗ ಬಿ. ಹುಡೇದ, ಕೃಷ್ಣಗೌಡ ಪಾಟೀಲ್, ಕಲಬುರಗಿ ವಿಭಾಗದಿಂದ ಜೆ.ಎಂ. ಶಿವಪ್ರಸಾದ್, ಅಭಿಷೇಕ ಆರ್. ಪಾಟೀಲ್, ವಿಶ್ವನಾಥರೆಡ್ಡಿ ಎಸ್. ದರ್ಶನಾಪೂರ ಆಯ್ಕೆಯಾಗಿದ್ದಾರೆ. ಇತರೆ ಸಹಕಾರ ಸಂಸ್ಥೆಗಳ ಕ್ಷೇತ್ರದಿಂದ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಚುನಾಯಿತರಾಗಿದ್ದಾರೆ. ಈ ಕುರಿತು ಮಾತನಾಡಿರುವ ಜಿ.ಟಿ ದೇವೇಗೌಡ ಅವರು, ರಾಜ್ಯದ 48 ಸಾವಿರಕ್ಕೂ ಅಧಿಕ ಸಹಕಾರ ಸಂಸ್ಥೆಗಳ ಮಾತೃ ಸಂಸ್ಥೆಯಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಕಳೆದ 102 ವರ್ಷಗಳಿಂದ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಸಹಕಾರ ಮಹಾಮಂಡಳದ ಎಲ್ಲ ಕಾರ್ಯಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ನೀಡುತ್ತಿದೆ. ಸಿಎಂ ಡಿ.ಕೆ. ಶಿವಕುಮಾರ್, ಡಿಸಿಎಂ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರ ಸಚಿವ ಲಕ...