ಕರ್ನಾಟಕದಲ್ಲಿ ಅಕ್ರಮ ಕೇರಳ ಲಾಟರಿ ಹಾವಳಿ ತಕ್ಷಣ ನಿಲ್ಲಿಸಿ – ರಾಜ್ಯ ಲಾಟರಿ ಯೋಜನೆ ಮರು ಜಾರಿಗೊಳಿಸಿ: ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘದ ಆಗ್ರಹ*
*ಕರ್ನಾಟಕದಲ್ಲಿ ಅಕ್ರಮ ಕೇರಳ ಲಾಟರಿ ಹಾವಳಿ ತಕ್ಷಣ ನಿಲ್ಲಿಸಿ – ರಾಜ್ಯ ಲಾಟರಿ ಯೋಜನೆ ಮರು ಜಾರಿಗೊಳಿಸಿ: ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘದ ಆಗ್ರಹ* ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ವ್ಯಾಪಕವಾಗಿ ನಡೆಯುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಅಕ್ರಮ ಲಾಟರಿ ಮಾರಾಟವನ್ನು ಸಂಪೂರ್ಣವಾಗಿ ತಡೆದು, ಶಾಸನಬದ್ಧ ಕರ್ನಾಟಕ ರಾಜ್ಯ ಲಾಟರಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ (ರಿ.) ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಸಿ. ರಾಮಕೃಷ್ಣ, ವಕೀಲರಾದ ಭಾಸ್ಕರ್ ಬಾಬುರವರು ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದರು. ರಾಜ್ಯದಲ್ಲಿ ಅಕ್ರಮ ಲಾಟರಿಯಿಂದ ಉಂಟಾಗಿರುವ ಸಮಸ್ಯೆಗಳು, ಸರ್ಕಾರದ ನಿರ್ಲಕ್ಷ್ಯ ಹಾಗೂ ಸಾವಿರಾರು ಕುಟುಂಬಗಳು ಎದುರಿಸುತ್ತಿರುವ ಸಂಕಷ್ಟಗಳು ಹಲವಾರು. ಸಂಘದ ಪ್ರಕಾರ, 1998ರಲ್ಲಿ ಕೇರಳ ಸರ್ಕಾರ ಆರಂಭಿಸಿದ ಲಾಟರಿ ಯೋಜನೆಯು ಕಳೆದ ಹಲವು ವರ್ಷಗಳಿಂದ ಕರ್ನಾಟಕದಲ್ಲಿ ಅಕ್ರಮವಾಗಿ ವ್ಯಾಪಕವಾಗಿ ಮಾರಾಟವಾಗುತ್ತಿದ್ದು, ಪ್ರತಿದಿನ ನೂರಾರು ಕೋಟಿ ರೂಪಾಯಿಗಳ ವ್ಯವಹಾರ ನಡೆಯುತ್ತಿದೆ. ಇದರಿಂದ ಕರ್ನಾಟಕ ಸರ್ಕಾರಕ್ಕೆ ಅಪಾರ ಪ್ರಮಾಣದ ಆದಾಯ ನಷ್ಟವಾಗುತ್ತಿದ್ದು. ಈ ಹಿಂದೆ ಕರ್ನಾಟಕ ಸರ್ಕಾರದ ಲಾಟರಿ ಯೋಜನೆಯ ಮೂಲಕ ಸುಮಾರು 5,000 ರಿಂದ 6,000 ಕೋಟಿ ರೂಪಾಯಿಗಳ ವಾರ್ಷಿಕ ಆದಾಯ ರಾಜ್ಯದ ಖಜಾನೆಗೆ ಹರಿದು ಬರುತ್ತಿತ್...