ಗಣೇಶ ಹಬ್ಬದ ಮುನ್ನ ಗಣೇಶ್ ದೇವಸ್ಥಾನದ ಗೋಪುರ ತೆರವು — ಮೇಣದಬತ್ತಿ ಪ್ರತಿಭಟನೆ
ಗಣೇಶ ಹಬ್ಬದ ಮುನ್ನ ಗಣೇಶ್ ದೇವಸ್ಥಾನದ ಗೋಪುರ ತೆರವು — ಮೇಣದಬತ್ತಿ ಪ್ರತಿಭಟನೆ ನೋಟಿಸ್ ನೀಡದೇ ತೆರವುಗೊಳಿಸಿದ ಆರೋಪದ ವಿರುದ್ಧ ಆಕ್ರೋಶ: ಡಾ. ಎಸ್. ಸಂಗಮೇಶ್ ಬೆಂಗಳೂರು, ಆಗಸ್ಟ್ 22: ಗಣೇಶ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ AECS Layoutನ ಗಣೇಶ್ ದೇವಸ್ಥಾನದ ಗೋಪುರವನ್ನು ಮುಂಚಿತ ನೋಟಿಸ್ ನೀಡದೇ ತೆರವುಗೊಳಿಸಲಾಗಿದೆ ಎಂಬ ಆರೋಪದ ವಿರುದ್ಧ ಕರ್ನಾಟಕ ರಾಜ್ಯ ಯುವ ಸಮೂಹದ ವತಿಯಿಂದ ಮೇಣದಬತ್ತಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಹಲವಾರು ಸ್ಥಳೀಯರು ಹಾಗೂ ಹೊರರಾಜ್ಯಗಳಿಂದ ಬಂದಿದ್ದ ಸಾರ್ವಜನಿಕರು ಭಾಗವಹಿಸಿ, ದೇವಸ್ಥಾನ ತೆರವು ಕಾರ್ಯಾಚರಣೆಯ ಕುರಿತು ತಮ್ಮ ಆಕ್ಷೇಪ ವ್ಯಕ್ತಪಡಿಸಿದರು. ಕಾನೂನುಬದ್ಧ ಪ್ರಕ್ರಿಯೆ ಪಾಲಿಸಬೇಕು ಮತ್ತು ಪ್ರಕರಣದ ಸತ್ಯಾಂಶವನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಯುವ ಸಮೂಹದ ರಾಜ್ಯಾಧ್ಯಕ್ಷರಾದ ಡಾ. ಎಸ್. ಸಂಗಮೇಶ್, ದೇವಸ್ಥಾನವು ಸರ್ಕಾರಿ ಅಥವಾ BDA ಜಾಗದಲ್ಲಿದ್ದು ಅತಿಕ್ರಮಣವಾಗಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಕ್ಕೆ ನಮ್ಮ ವಿರೋಧವಿಲ್ಲ. ನ್ಯಾಯಾಲಯದ ಆದೇಶಕ್ಕೂ ಸಂಪೂರ್ಣ ಗೌರವವಿದೆ. ಆದರೆ, ಕಾನೂನುಬದ್ಧ ಪ್ರಕ್ರಿಯೆ ಪಾಲಿಸದೇ ತೆರವು ಕಾರ್ಯಾಚರಣೆ ನಡೆಸಿರುವುದಾದರೆ ಅದನ್ನು ಪ್ರಶ್ನಿಸುವುದು ನಮ್ಮ ಹಕ್ಕು ಎಂದು ಅವರು ಹೇಳಿದರು. “ದೇವಸ್ಥಾನಕ್ಕೆ ನೋಟಿಸ್ ನೀಡಲಾಗಿತ್ತೇ?” “...