ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿಂದ 26 ಕೋಟಿ ಷೇರು ಬಂಡವಾಳ ಸಂಗ್ರಹ; ನೂತನ ಅಧ್ಯಕ್ಷ ಸದಾಶಿವ ರೆಡ್ಡಿ.
ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿಂದ 26 ಕೋಟಿ ಷೇರು ಬಂಡವಾಳ ಸಂಗ್ರಹ; ನೂತನ ಅಧ್ಯಕ್ಷ ಸದಾಶಿವ ರೆಡ್ಡಿ. ಬೆಂಗಳೂರು ಫೆಬ್ರವರಿ 4; ಬೆಂಗಳೂರು ನಗರದ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲಿ ಒಂದಾದ ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ಸುಮಾರು 11 ಸಾವಿರ ಸದಸ್ಯರನ್ನು ಹೊಂದಿದ್ದು,26 ಕೋಟಿ ಷೇರು ಬಂಡವಾಳ ಹೊಂದಿದೆ ಎಂದು ನೂತನ ಅಧ್ಯಕ್ಷ ಸದಾಶಿವ ರೆಡ್ಡಿ, ಉಪಾಧ್ಯಕ್ಷ ಸಿ ಚೆನ್ನಾರೆಡ್ಡಿ ತಿಳಿಸಿದರು. ಪ್ರೆಸ್ ಕ್ಲಬ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು,ಜನವರಿ 2026ರ ಅಂತ್ಯಕ್ಕೆ ಬ್ಯಾಂಕಿನ ಠೇವಣಿ 478 ಕೋಟಿ ರೂಪಾಯಿಗಳಷ್ಟಿದ್ದು,336 ಕೋಟಿ ರೂಪಾಯಿ ಸಾಲ ವಿತರಿಸಲಾಗಿದೆ. ಬ್ಯಾಂಕಿನ ಒಟ್ಟು ಹೂಡಿಕೆಗಳು 204 ಕೋಟಿ ರೂಪಾಯಿಗಳಷ್ಟಿದ್ದು, ಇದರಲ್ಲಿ ಶೇ.68% ರಷ್ಟನ್ನು ಸರ್ಕಾರಿ ಹೂಡಿಕೆಗಳಲ್ಲಿ ತೊಡಗಿಸಲಾಗಿದೆ. ಬ್ಯಾಂಕಿನ ಒಟ್ಟಾರೆ 814 ಕೋಟಿ ರೂಪಾಯಿಗಳಷ್ಟು ವ್ಯವಹಾರ ಹೊಂದಿದೆ ಹಾಗೂ 2024-25 ನೇ ಸಾಲಿನಲ್ಲಿ 8.07 ಕೋಟಿ ರೂಪಾಯಿಗಳ ನಿವ್ವಳ ಲಾಭಗಳಿಸಿದೆ ಎಂದರು. ಮಾರ್ಚ್ 2025ರ ಅಂತ್ಯಕ್ಕೆ ಬ್ಯಾಂಕಿನ ಒಟ್ಟು ಅನುತ್ಪಾದಕ ಆಸ್ತಿಯ ಪ್ರಮಾಣ ಶೇ.1.25 ರಷ್ಟಿದ್ದು ಹಾಗೂ ಸತತ ಮೂರು ವರ್ಷಗಳಿಂದ ಶೂನ್ಯ ನಿವ್ವಳ ನಿಷ್ಕ್ರಿಯ ಆಸ್ತಿಗಳನ್ನು ಹೊಂದಿದೆ. Phonepay, Google pay, POS ಇ- ಕಾಮರ್ಸ್ಗಳೊಂದಿಗೆ ಎಲ್ಲಾ ರೀತಿಯ ...