ಸಾಹಿತ್ಯದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ: ಪದ್ಮಶ್ರೀ ಡಾ. ದೊಡ್ಡರಂಗೇಗೌಡ
ಸಾಹಿತ್ಯದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ: ಪದ್ಮಶ್ರೀ ಡಾ. ದೊಡ್ಡರಂಗೇಗೌಡ ಬೆಂಗಳೂರು: ಜ್ಞಾನವೇ ಶಕ್ತಿ, ಆ ಜ್ಞಾನ ಮತ್ತು ಸಂಸ್ಕೃತಿಯನ್ನು ಜಾಗೃತಗೊಳಿಸಿ ಸಮಾಜವನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸುವ ಶಕ್ತಿ ಸಾಹಿತ್ಯಕ್ಕೆ ಮಾತ್ರ ಇದೆ. ಅದರಿಂದಲೇ ಸಮಾಜದ ಪರಿವರ್ತನೆ ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ಹಿರಿಯ ಕವಿ ಹಾಗೂ ಸಾಹಿತಿ ಡಾ. ದೊಡ್ಡರಂಗೇಗೌಡ ಅಭಿಪ್ರಾಯಪಟ್ಟರು. ಬೆಂಗಳೂರು ವಕೀಲರ ಸಾಹಿತ್ಯ ಕೂಟದ ವತಿಯಿಂದ ಸಾಹಿತ್ಯ ಲೋಕದ ಹಿರಿಯ ಕವಿ ಹಾಗೂ ಸಾಹಿತಿ ಪದ್ಮಶ್ರೀ ಡಾ. ದೊಡ್ಡರಂಗೇಗೌಡ ರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಸಾಹಿತ್ಯ ಸಿಂಧು ಎನ್ನುವ ಬಿರುದನ್ನು ಅವರಿಗೆ ನೀಡಿ ಗೌರವಿಸಲಾಯಿತು. ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಅವರು, ಸಾಹಿತ್ಯ ಎನ್ನುವುದು ಕೇವಲ ಶಬ್ದಗಳ ಜೋಡಣೆಯಲ್ಲ, ಅದು ಮನುಷ್ಯನ ವ್ಯಕ್ತಿತ್ವಕ್ಕೆ ಸಂಸ್ಕಾರ ಮತ್ತು ವೈಚಾರಿಕ ಜಾಗೃತಿಯನ್ನು ನೀಡುವ ದಿವ್ಯ ಶಕ್ತಿ. ಇಂದಿನ ಆಧುನಿಕ ಯುಗದಲ್ಲಿ, ಸಮಾಜದ ನೈತಿಕ ಮೌಲ್ಯಗಳು ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಸಾಹಿತ್ಯದ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದರು. ಜ್ಞಾನದ ಶಕ್ತಿಗಿಂತ ಮಿಗಿಲಾದದ್ದು ಬೇರೊಂದಿಲ್ಲ. ಒಬ್ಬ ವ್ಯಕ್ತಿಯ ಬೆಳವಣಿಗೆಗೆ, ಬುದ್ಧಿವಂತಿಕೆಗೆ ಹಾಗೂ ಆತನ ವ್ಯಕ್ತಿತ್ವದ ವಿಕಸನಕ್ಕೆ ಜ್ಞಾನ ಮತ್ತು ಉತ್ತಮ ಅಭಿರುಚಿಗಳೇ ಪ್ರಮುಖ ಕಾರಣವಾಗುತ್ತವೆ.ಇಂದಿನ ತಂತ್ರಜ್ಞಾನದ ಓಟದಲ್ಲಿ ಮೊಬೈಲ್ ಮತ್ತು...