Posts

ಸಾಹಿತ್ಯದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ: ಪದ್ಮಶ್ರೀ ಡಾ. ದೊಡ್ಡರಂಗೇಗೌಡ

Image
 ಸಾಹಿತ್ಯದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ: ಪದ್ಮಶ್ರೀ ಡಾ. ದೊಡ್ಡರಂಗೇಗೌಡ  ಬೆಂಗಳೂರು: ಜ್ಞಾನವೇ ಶಕ್ತಿ, ಆ ಜ್ಞಾನ ಮತ್ತು ಸಂಸ್ಕೃತಿಯನ್ನು ಜಾಗೃತಗೊಳಿಸಿ ಸಮಾಜವನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸುವ ಶಕ್ತಿ ಸಾಹಿತ್ಯಕ್ಕೆ ಮಾತ್ರ ಇದೆ. ಅದರಿಂದಲೇ ಸಮಾಜದ ಪರಿವರ್ತನೆ ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ಹಿರಿಯ ಕವಿ ಹಾಗೂ ಸಾಹಿತಿ ಡಾ. ದೊಡ್ಡರಂಗೇಗೌಡ ಅಭಿಪ್ರಾಯಪಟ್ಟರು. ಬೆಂಗಳೂರು ವಕೀಲರ ಸಾಹಿತ್ಯ ಕೂಟದ ವತಿಯಿಂದ ಸಾಹಿತ್ಯ ಲೋಕದ ಹಿರಿಯ ಕವಿ ಹಾಗೂ ಸಾಹಿತಿ ಪದ್ಮಶ್ರೀ ಡಾ. ದೊಡ್ಡರಂಗೇಗೌಡ ರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಸಾಹಿತ್ಯ ಸಿಂಧು ಎನ್ನುವ ಬಿರುದನ್ನು ಅವರಿಗೆ ನೀಡಿ ಗೌರವಿಸಲಾಯಿತು. ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಅವರು, ಸಾಹಿತ್ಯ ಎನ್ನುವುದು ಕೇವಲ ಶಬ್ದಗಳ ಜೋಡಣೆಯಲ್ಲ, ಅದು ಮನುಷ್ಯನ ವ್ಯಕ್ತಿತ್ವಕ್ಕೆ ಸಂಸ್ಕಾರ ಮತ್ತು ವೈಚಾರಿಕ ಜಾಗೃತಿಯನ್ನು ನೀಡುವ ದಿವ್ಯ ಶಕ್ತಿ. ಇಂದಿನ ಆಧುನಿಕ ಯುಗದಲ್ಲಿ, ಸಮಾಜದ ನೈತಿಕ ಮೌಲ್ಯಗಳು ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಸಾಹಿತ್ಯದ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದರು. ಜ್ಞಾನದ ಶಕ್ತಿಗಿಂತ ಮಿಗಿಲಾದದ್ದು ಬೇರೊಂದಿಲ್ಲ. ಒಬ್ಬ ವ್ಯಕ್ತಿಯ ಬೆಳವಣಿಗೆಗೆ, ಬುದ್ಧಿವಂತಿಕೆಗೆ ಹಾಗೂ ಆತನ ವ್ಯಕ್ತಿತ್ವದ ವಿಕಸನಕ್ಕೆ ಜ್ಞಾನ ಮತ್ತು ಉತ್ತಮ ಅಭಿರುಚಿಗಳೇ ಪ್ರಮುಖ ಕಾರಣವಾಗುತ್ತವೆ.ಇಂದಿನ ತಂತ್ರಜ್ಞಾನದ ಓಟದಲ್ಲಿ ಮೊಬೈಲ್ ಮತ್ತು...

ಜಾಣ ಕುರುಡು, ಜಾಣ ಮೌನದ ,ಬಿಜೆಪಿ ಪಕ್ಷ ತಂದೆ ಮಕ್ಕಳ ಪಕ್ಷ,*

Image
 *ಜಾಣ ಕುರುಡು, ಜಾಣ ಮೌನದ ,ಬಿಜೆಪಿ ಪಕ್ಷ ತಂದೆ ಮಕ್ಕಳ ಪಕ್ಷ,*  *ಕಾರ್ಯಕರ್ತರನ್ನ ಬಳಸಿಕೊಂಡು ದೂರ ಮಾಡುತ್ತಾರೆ, ಕೆಲಸ ಮಾಡುವವರಿಗೆ ಬಿಜೆಪಿ ಪಕ್ಷದಲ್ಲಿ ಬೆಲೆಯಿಲ್ಲ* *ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 150ಸ್ಥಾನ ಗೆಲುವಿಗೆ ಶ್ರಮಿಸುತ್ತೇನೆ- ನೆ.ಲ.ನರೇಂದ್ರಬಾಬು* ಬೆಂಗಳೂರು:ಮೌರ್ಯ ಹೋಟೆಲ್ ಸಭಾಂಗಣ: ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ನೆ.ಲ.ನರೇಂದ್ರ ಬಾಬುರವರು ಬಿಜೆಪಿ ಪಕ್ಷದ ಹಿಂದುಳಿದ ವರ್ಗ ರಾಜ್ಯಾಧ್ಯಕ್ಷ ಸ್ಥಾನ, ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ , ಮುಂದಿನ ರಾಜಕೀಯ ನಡೆ ಕುರಿತು ಮಾಧ್ಯಮಗೋಷ್ಠಿ ಏರ್ಪಡಿಸಿದ್ದರು. *ನೆ.ಲ.ನರೇಂದ್ರಬಾಬುರವರು* ಮಾತನಾಡಿ ಮಹಾನಗರ ಪಾಲಿಕೆ ಸದಸ್ಯನಾಗಿ ಮೂರು ಬಾರಿ  ಮತ್ತು ಎರಡು ಬಾರಿ ಶಾಸಕನಾಗಿ ಕಳೆದ 40ವರ್ಷಗಳಿಂದ ಸಾರ್ವಜನಿಕರ ಬೆಂಬಲದಿಂದ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಇಂದು ಬಿಜೆಪಿ ಪಕ್ಷಕ್ಕೆ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕಳೆದ 10ವರ್ಷಗಳಿಂದ ಬಿಜೆಪಿ ಪಕ್ಷಕ್ಕೆ ನನ್ನನ ಸಮರ್ಪಣೆ ಮಾಡಿಕೊಂಡೆ ಅದರೆ ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ   ನನ್ನ ಮತ್ತು ನನ್ನ ಕಾರ್ಯಕರ್ತರನ್ನು ದೂರಮಾಡಿದರು ಮತ್ತು ನನ್ನ ವಿರುದ್ದ ಪಿತೂರಿ ಮಾಡಿದವರ ಮೇಲೆ  ಕ್ರಮ ಕೈಗೊಳ್ಳಲ್ಲಿ...

ಕೆಎಸ್‌ಟಿಡಿಎಸ್ ಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ವರದಿ ಸಂಪೂರ್ಣ ಸುಳ್ಳು: ಡಿ.ಲಕ್ಷ್ಮೀವೆಂಕಟೇಶ್

Image
 ಕೆಎಸ್‌ಟಿಡಿಎಸ್ ಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ವರದಿ ಸಂಪೂರ್ಣ ಸುಳ್ಳು: ಡಿ.ಲಕ್ಷ್ಮೀವೆಂಕಟೇಶ್ ಬೆಂಗಳೂರು: ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತದ ವಿವಿಧ ಘಟಕಗಳಲ್ಲಿ ಭ್ರಷ್ಟಾಚಾರ ನಡೆದಿರುವುದಾಗಿ ವರದಿಯಾಗಿರುವುದು ಸಂಪೂರ್ಣ ಸುಳ್ಳು ಎಂದು ಕೆಎಸ್‌ಟಿಡಿಸಿ ಎಂಪ್ಲಾಯಿಸ್ ಯೂನಿಯನ್ ಸ್ಪಷ್ಟಪಡಿಸಿದೆ. ಈ ಕುರಿತು ಬುಧವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಯೂನಿಯನ್ ಅಧ್ಯಕ್ಷ ಡಿ.ಲಕ್ಷ್ಮೀವೆಂಕಟೇಶ್ ಮಾತನಾಡಿ, ನಮ್ಮ ಸಂಘಟನೆಯ ವಿರುದ್ಧ ಸ್ಪರ್ಧಿಸಿ ಹೀನಾಯ ಸೋಲನುಂಡ ವರ್ಕಸ್ ಯೂನಿಯನ್‌ನ ಅಧ್ಯಕ್ಷರೆನಿಸಿಕೊಂಡ ವ್ಯಕ್ತಿಯೋರ್ವರು ಈ ಎಲ್ಲಾ ಸುಳ್ಳು ಪ್ರಚಾರಗಳಿಗೆ ಕಾರಣಕರ್ತರಾಗಿರುತ್ತಾರೆ ಎಂದು ಆರೋಪಿಸಿದರು. ಪರಾಜಿತ ವರ್ಕಸ್ ಯೂನಿಯನ್ ಅಧ್ಯಕ್ಷರೆನಿಸಿಕೊಂಡ ವ್ಯಕ್ತಿಯು ಕೆಎಸ್‌ಟಿಡಿಸಿ ನಿಗಮದ ಅಧಿಕಾರಿ ವರ್ಗ, ಕಾರ್ಮಿಕರು ಮತ್ತು ಗುತ್ತಿಗೆದಾರರಿಗೆ ಬೆದರಿಕೆ, ಬ್ಲಾಕ್ ಮೇಲ್ ತಂತ್ರಗಳನ್ನು ಬಳಸಿ ಹಣ ವಸೂಲಿ ದಂಧೆಗಳಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಎ.ಬಾಬು ಪೂಜಾರಿ ಮಾತನಾಡಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಆಡಳಿತ ಹಾಗೂ ನೌಕರರ ವಿರುದ್ಧ ಕೆಲವು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಆರೋಪಗಳು ಹಾಗೂ ಅಪಪ್ರಚಾರಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ನ...

ಫೈಲ್‌ನೇಮ್: ಕೆಎಸ್‌ಟಿಡಿಎಸ ಭ್ರಷ್ಟಾಚಾರ ನಡೆದಿದೆ ಎನ್ನುವ ವರದಿ ಸಂಪೂರ್ಣ ಸುಳ್ಳು

Image
 ಫೈಲ್‌ನೇಮ್: ಕೆಎಸ್‌ಟಿಡಿಎಸ ಭ್ರಷ್ಟಾಚಾರ ನಡೆದಿದೆ ಎನ್ನುವ ವರದಿ ಸಂಪೂರ್ಣ ಸುಳ್ಳು ಇತ್ತೀಚಿನ ದಿನಗಳಲ್ಲಿ ಕೆಲವು ಮಾಧ್ಯಮಗಳಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ ವಿವಿಧ ಘಟಕಗಳಲ್ಲಿ ಭ್ರಷ್ಟಾಚಾರ ನಡೆದಿರುವುದಾಗಿ ವರದಿಯಾಗಿರುವುದು ಸಂಪೂರ್ಣ ಸುಳ್ಳು ಎಂಬುದಾಗಿ ಕೆಎಸ್‌ಟಿಡಿಸಿ ಎಂಪ್ಲಾಯಿಸ್ ಯೂನಿಯನ್ ಸ್ಪಷ್ಟೀಕರಣ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಯೂನಿಯನ್ ಅಧ್ಯಕ್ಷ ಡಿ.ಲಕ್ಷ್ಮೀ ವೆಂಕಟೇಶ್ ಮಾತನಾಡಿ, ನಮ್ಮ ಸಂಘಟನೆಯ ವಿರುದ್ಧ ಸ್ಪರ್ಧಿಸಿ ಹೀನಾಯ ಸೋಲನುಂಡ ವರ್ಕಸ್ ಯೂನಿಯನ್‌ನ ಅಧ್ಯಕ್ಷರೆನಿಸಿಕೊಂಡ ವ್ಯಕ್ತಿಯೋರ್ವರು ಈ ಎಲ್ಲಾ ಸುಳ್ಳು ಪ್ರಚಾರಗಳಿಗೆ ಕಾರಣ ಕರ್ತರಾಗಿರುತ್ತಾರೆ ಎಂದು ಆರೋಪಿಸಿದರು. ಪರಾಜಿತ ವರ್ಕಸ್ ಯೂನಿಯನ್ ಅಧ್ಯಕ್ಷರೆನಿಸಿಕೊಂಡ ವ್ಯಕ್ತಿಯು ಕೆಎಸ್‌ಟಿಡಿಸಿ ನಿಗಮದ ಅಧಿಕಾರಿ ವರ್ಗ, ಕಾರ್ಮಿಕರು ಮತ್ತು ಗುತ್ತಿಗೆದಾರರಿಗೆ ಬೆದರಿಕೆ, ಬ್ಲಾಕ್ ಮೇಲ್ ತಂತ್ರಗಳನ್ನು ಬಳಸಿ ಹಣ ವಸೂಲಿ ದಂಧೆಗಳಲ್ಲಿ ತೊಡಗಿರುತ್ತಾರೆ ಎಂದು ತಿಳಿಸಿದರು. ಯೂನಿಯನ್ ಗೌರವಾಧ್ಯಕ್ಷ ಗುರುಪ್ರಸಾದ್, ಪ್ರಧಾನ ಕಾರ್ಯದರ್ಶಿ ಎ.ಬಾಬು ಪೂಜಾರಿ, ಪದಾಧಿಕಾರಿಗಳಾದ ಗೋಪಾಲ್, ಎಸಿ ಗುಂಡಯ್ಯಗೌಡ, ವಿನಯ್, ಲಕ್ಷ್ಮೀಪತಿ ಇತರರಿದ್ದರು.

ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ.

Image
 ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ.   ಬೆಂಗಳೂರು ಸೆಪ್ಟೆಂಬರ್ 8; ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನ 17ನೇ ಪದವಿ ಪ್ರದಾನ ಸಮಾರಂಭ ಇಂದು ನಡೆಯಿತು.  ಆರ್‌ಆರ್‌ಎಮ್‌ ಸಿಎಚ್ ಕ್ಯಾಂಪಸ್ ನ ಎಸಿಎಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ 736 ಪದವೀಧರ ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರ ಪಡೆದರು. ಪದವಿ ಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷ ಡಾ. ಎ.ಸಿ. ಷಣ್ಮುಗಂ,ಇಸ್ರೋ  ವಿಜ್ಞಾನಿ, ಚಂದ್ರಯಾನ ಯೋಜನಾ ನಿರ್ದೇಶಕ ಮತ್ತು ಮಿಷನ್ ಡೈರೆಕ್ಟರ್ ಡಾ. ಪಿ. ವೀರಮುತ್ತುವೇಲ್,ಇನ್ಫೋಸಿಸ್ ಲಿಮಿಟೆಡ್‌ ಸಹಾಯಕ ಉಪಾಧ್ಯಕ್ಷ ವಿಕ್ಟರ್ ಸುಂದರರಾಜ,ವಿಪ್ರೋ ಲಿಮಿಟೆಡ್‌ನ ಜಾಗತಿಕ ಕಾರ್ಯತಂತ್ರದ ನೇಮಕಾತಿ ಮುಖ್ಯಸ್ಥ ಪ್ರವೀಣ್ ಕಾಮತ್ ಪದವಿ ಪ್ರಧಾನ ಮಾಡಿದರು ಪದವೀಧರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಾ. ಎ.ಸಿ. ಷಣ್ಮುಗಂ, ಭವಿಷ್ಯವನ್ನು ಮಹತ್ವಾಕಾಂಕ್ಷೆ, ಜವಾಬ್ದಾರಿ ಮತ್ತು ಸಮಾಜಕ್ಕೆ ಅರ್ಥಪೂರ್ಣ ಕೊಡುಗೆ ನೀಡುವ ಬದ್ಧತೆಯೊಂದಿಗೆ ಎದುರಿಸಬೇಕು,ಯುವ ವೃತ್ತಿಪರರ ಜೀವನ ಮತ್ತು ವೃತ್ತಿಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಪೋಷಕರ ಬೆಂಬಲ ಮತ್ತು ಶಿಕ್ಷಕರ ಮಾರ್ಗದರ್ಶನವನ್ನು ಸ್ಮರಿಸುವ ಅಗತ್ಯವನ್ನು ಅವರು ಒತ್ತು ನೀಡಿದರು. ಪದವೀಧರರು ಕೇವಲ ವೈಯಕ್ತಿಕ ಯಶಸ್ಸನ್ನು ಮಾತ್ರವಲ್ಲದೆ, ದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕವಾದ ಪ್ರಗತಿಯನ್ನು ಸಾ...

ಸಹಕಾರ ಮಹಾಮಂಡಲದ ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ, ಉಪಾಧ್ಯಕ್ಷರಾಗಿ ಬಿ.ಕೆ. ಶಿವಕುಮಾರ್ ಆಯ್ಕೆ

Image
 ಸಹಕಾರ ಮಹಾಮಂಡಲದ ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ, ಉಪಾಧ್ಯಕ್ಷರಾಗಿ ಬಿ.ಕೆ. ಶಿವಕುಮಾರ್ ಆಯ್ಕೆ ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ನೂತನ ಅಧ್ಯಕ್ಷರಾಗಿ  ಶಾಸಕ ಜಿ.ಟಿ ದೇವೇಗೌಡ ಹಾಗೂ ಉಪಾಧ್ಯಕ್ಷರಾಗಿ ಬಿ.ಕೆ. ಶಿವಕುಮಾರ್ ಶುಕ್ರವಾರ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರು ವಿಭಾಗದಿಂದ ಜಿ.ಟಿ. ದೇವೇಗೌಡ, ಬಿ.ಸಿ.ಲೋಕಪ್ಪಗೌಡ, ಬಿ.ಶಶಿಕುಮಾ‌ರ್ ರೈ. ಬೆಂಗಳೂರು ವಿಭಾಗದಿಂದ ಎಚ್.ಎನ್ ಅಶೋಕ, ಬಿ.ಕೆ. ಶಿವಕುಮಾರ್, ಕೆ.ಪಿ. ಚನ್ನಬೈರೇಗೌಡ, ಕೆ. ಸುನೀಲ್, ಬೆಳಗಾವಿ ವಿಭಾಗದಿಂದ ಜಗದೀಶ್ ಎಂ. ಕವಟಗಿಮಠ, ಕಾಶಿಲಿಂಗ ಬಿ. ಹುಡೇದ, ಕೃಷ್ಣಗೌಡ ಪಾಟೀಲ್‌, ಕಲಬುರಗಿ ವಿಭಾಗದಿಂದ ಜೆ.ಎಂ. ಶಿವಪ್ರಸಾದ್, ಅಭಿಷೇಕ ಆರ್. ಪಾಟೀಲ್, ವಿಶ್ವನಾಥರೆಡ್ಡಿ ಎಸ್. ದರ್ಶನಾಪೂರ ಆಯ್ಕೆಯಾಗಿದ್ದಾರೆ. ಇತರೆ ಸಹಕಾರ ಸಂಸ್ಥೆಗಳ ಕ್ಷೇತ್ರದಿಂದ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಚುನಾಯಿತರಾಗಿದ್ದಾರೆ. ಈ ಕುರಿತು ಮಾತನಾಡಿರುವ ಜಿ.ಟಿ ದೇವೇಗೌಡ ಅವರು, ರಾಜ್ಯದ 48 ಸಾವಿರಕ್ಕೂ ಅಧಿಕ ಸಹಕಾರ ಸಂಸ್ಥೆಗಳ ಮಾತೃ ಸಂಸ್ಥೆಯಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಕಳೆದ 102 ವರ್ಷಗಳಿಂದ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಸಹಕಾರ ಮಹಾಮಂಡಳದ ಎಲ್ಲ ಕಾರ್ಯಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ನೀಡುತ್ತಿದೆ. ಸಿಎಂ ಡಿ.ಕೆ. ಶಿವಕುಮಾರ್, ಡಿಸಿಎಂ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರ ಸಚಿವ ಲಕ...

1,000 ಹೊಸ ಆರಂಭಗಳು: ತಲಸೇಮಿಯಾ ಬಾಧಿತ ಮಕ್ಕಳಿಗೆ ಆಶಾಕಿರಣವಾದ DKMS–ಸಂಕಲ್ಪ ಸಹಭಾಗಿತ್ವ

Image
1,000 ಹೊಸ ಆರಂಭಗಳು: ತಲಸೇಮಿಯಾ ಬಾಧಿತ ಮಕ್ಕಳಿಗೆ ಆಶಾಕಿರಣವಾದ DKMS–ಸಂಕಲ್ಪ ಸಹಭಾಗಿತ್ವ 1,000 ಮಕ್ಕಳ ಕಾಂಡಕೋಶ ಕಸಿ ಮೈಲಿಗಲ್ಲು ಸಾಧನೆ; ಸೆಪ್ಟೆಂಬರ್ 5ರಂದು ಬೆಂಗಳೂರಿನಲ್ಲಿ ವಿಶೇಷ ಆಚರಣೆ ಬೆಂಗಳೂರು, ಸೆಪ್ಟೆಂಬರ್ 4, 2026: ತಲಸೇಮಿಯಾ ಸೇರಿದಂತೆ ತೀವ್ರ ಅನುವಂಶಿಕ ರಕ್ತ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲೊಂದು ದಾಖಲಾಗಿದೆ. ಸಂಕಲ್ಪ ಇಂಡಿಯಾ ಫೌಂಡೇಶನ್ 1,000 ಮಕ್ಕಳಿಗೆ ಸ್ಟೆಮ್ ಸೆಲ್ ಟ್ರಾನ್ಸ್‌ಪ್ಲಾಂಟೇಶನ್ (ಕಾಂಡಕೋಶ ಕಸಿ) ಯಶಸ್ವಿಯಾಗಿ ನೆರವೇರಿಸಿದ್ದು, ಸಾವಿರಾರು ಕುಟುಂಬಗಳ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಈ ಸಾಧನೆಯನ್ನು “1,000 ಹೊಸ ಆರಂಭಗಳು” ಎಂಬ ಪರಿಕಲ್ಪನೆಯಡಿ ಸೆಪ್ಟೆಂಬರ್ 5ರಂದು ಬೆಂಗಳೂರಿನಲ್ಲಿ ಆಚರಿಸಲಾಗುತ್ತಿದೆ. ಸಂಕಲ್ಪ ಇಂಡಿಯಾ ಫೌಂಡೇಶನ್, ಅಂತಾರಾಷ್ಟ್ರೀಯ ಲಾಭರಹಿತ ಸಂಸ್ಥೆ DKMS ಹಾಗೂ ವೈದ್ಯಕೀಯ ಮತ್ತು ಜ್ಞಾನ ಪಾಲುದಾರ ಸಂಸ್ಥೆ ಕ್ಯೂರ್2ಚಿಲ್ಡ್ರನ್ ಫೌಂಡೇಶನ್ ನಡುವಿನ ದಶಕಕ್ಕೂ ಅಧಿಕ ಕಾಲದ ಸಹಭಾಗಿತ್ವದ ಪ್ರಮುಖ ಸಾಧನೆಯಾಗಿ ಈ ಮೈಲಿಗಲ್ಲು ಗುರುತಿಸಿಕೊಂಡಿದೆ. ತೀವ್ರ ತಲಸೇಮಿಯಾದಿಂದ ಬಳಲುತ್ತಿರುವ ಮಕ್ಕಳಿಗೆ ನಿಯಮಿತ ರಕ್ತಪೂರಣ ಮತ್ತು ದೀರ್ಘಕಾಲದ ಚಿಕಿತ್ಸೆಯ ಅವಲಂಬನೆಯಿಂದ ಹೊರಬಂದು ಆರೋಗ್ಯಕರ ಜೀವನ ನಡೆಸುವ ಅವಕಾಶವನ್ನು ಈ ಟ್ರಾನ್ಸ್‌ಪ್ಲಾಂಟೇಶನ್ ಕಾರ್ಯಕ್ರಮ ಒದಗಿಸುತ್ತಿದೆ. 820ಕ್ಕೂ ಹೆಚ್ಚು ಮಕ್ಕಳ ಚಿಕಿತ್ಸೆಗೆ DK...