ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನ ಸಂಪರ್ಕ ಕಛೇರಿ ಉದ್ಘಾಟನೆ*

 *ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನ ಸಂಪರ್ಕ ಕಛೇರಿ ಉದ್ಘಾಟನೆ*






ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಕಾಂಕ್ಷಿ ಮಾಜಿ ಉಪಮಹಾಪೌರರಾದ ಬಿ.ಎಸ್.ಪುಟ್ಟರಾಜುರವರ ಬಸವೇಶ್ವರನಗರದಲ್ಲಿ ಜನ ಸಂಪರ್ಕ ಕಛೇರಿ ಉದ್ಘಾಟನೆ ಸಮಾರಂಭ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು,ಶಾಸಕರಾದ ದಿನೇಶ್ ಗುಂಡೂರಾವ್ ರವರು,ಮಾಜಿ ಉಪಮಹಾಪೌರರಾದ ಬಿ.ಎಸ್.ಪುಟ್ಟರಾಜುರವರು ಉದ್ಘಾಟನೆ ಮಾಡಿದರು.

ಮಾಜಿ ಉಪಮಹಾಪೌರರು, ಕಾಂಗ್ರೆಸ್ ಪಕ್ಷದ ಅಕಾಂಕ್ಷಿ ಬಿ.ಎಸ್.ಪುಟ್ಟರಾಜುರವರು ಮಾತನಾಡಿ ಎರಡು ಬಾರಿ ಮಹಾನಗರ ಪಾಲಿಕೆ ಸದಸ್ಯನಾಗಿ,ಉಪಮಹಾಪೌರನಾಗಿ ಬೆಂಗಳೂರುನಗರ ಅಭಿವೃದ್ದಿಗೆ ಶ್ರಮಿಸಿದ್ದೇನೆ.

 ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಜನರ ಸಮಸ್ಯೆ ಮತ್ತು ಕುಂದುಕೂರತೆ ಅಲಿಸಲು ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಜನಸಂಪರ್ಕ ಕಛೇರಿ ಆರಂಭಿಸಲಾಗಿದೆ.

ಕಾಂಗ್ರೆಸ್ ಪಕ್ಷ ಬಡವರ,ದೀನದಲಿತರ ಪರ ಹೋರಾಟ ಮಾಡುವ ಪಕ್ಷ.

ಕರ್ನಾಟಕದಲ್ಲಿ ಯುವ ನಾಯಕ ರಾಹುಲ್ ಗಾಂಧಿರವರು ಭಾರತಜೋಡೋ ಪಾದಯಾತ್ರೆಯಿಂದ ಹೊಸ ಹುರಪು ಮೂಡಿದೆ.

ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು, ಮಾಜಿ ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು ಹಾಗೂ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿರವರ  ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷದ ಸಧೃಡವಾಗಿದೆ.

ಈ ಹಿಂದೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಜನತೆಗೆ ನೀಡಿದ 165ಭರವಸೆಗಳನ್ನು ಈಡೇರಿಸಿದ ದೇಶದ ಮೊಟ್ಟ ಮೊದಲ ಸರ್ಕಾರ ಕಾಂಗ್ರೆಸ್ ಪಕ್ಷದ ಸರ್ಕಾರ.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಕಾಯಕ ಸಿದ್ದಾಂತವನ್ನು ಪರಿಪಾಲಿಸುವ ಕಾಂಗ್ರೆಸ್ ಪಕ್ಷ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಮನಸ್ಸಿನಿ ಹಲವಾರು ಯೋಜನೆಗಳನ್ನು ಆನುಷ್ಠಾನಗೊಳಿಸಿ ಬಡವರ ಪಾಲಿಗೆ ಆಶಾಕಿರಣವಾಯಿತು.

ಕಾಂಗ್ರೆಸ್ ಪಕ್ಷ ರಾಜಾಜಿನಗರ ಉತ್ತಮ ಸಂಘಟನೆಯಿಂದ ಕೂಡಿದೆ.2023ರ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಕಾಂಗ್ರೆಸ್ ಪಕ್ಷ ಅಧಿಕಾರಿ ಬರಲಿದೆ ಎಂದು ಹೇಳಿದರು.

ಮಾಜಿ ಶಾಸಕ ಬಾಲಕೃಷ್ಣ,ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಜಿ.ಕೃಷ್ಣಮೂರ್ತಿ,ಶ್ರೀಮತಿ ಮಂಜುಳ ವಿಜಯಕುಮಾರ್,ಮುರುಳಿ ಹಾಗೂ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರುಗಳು ಪಾಲ್ಗೊಂಡಿದ್ದರು.

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims