ರಾಜ್ಯದ 224ಕ್ಷೇತ್ರಗಳಲ್ಲಿ ಹಿಂದೂ ಮಹಾಸಭಾ ಸ್ಪರ್ದೆ; ಭಾಸ್ಕರ್ ಪೂಜಾರಿ


ರಾಜ್ಯದ 224ಕ್ಷೇತ್ರಗಳಲ್ಲಿ ಹಿಂದೂ ಮಹಾಸಭಾ ಸ್ಪರ್ದೆ; ಭಾಸ್ಕರ್ ಪೂಜಾರಿ


ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಅಭ್ಯರ್ಥಿಗಳು ಸ್ಪರ್ದಿಸಲಿದ್ದು.ಚುನಾವಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಹಾಸಭಾದ ಉಪಾಧ್ಯಕ್ಷ ಭಾಸ್ಕರ್ ಪೂಜಾರಿ ತಿಳಿಸಿದರು.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಹಿಂದೂ ಮಹಾ ಸಭಾ ರಾಷ್ಟ್ರೀಯ ಪಕ್ಷವಾಗಿದ್ದು, ಈ ಬಾರಿ ಕರ್ನಾಟಕದಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಇರುವ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಪರ್ದೆಗೆ ಇಳಿಯಲಾಗುವುದು. ಅದೇ ರೀತಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿಯೂ ನಮ್ಮ ಅಭ್ಯರ್ಥಿಗಳನ್ನು ಕಣಕಿಳಿಸುವುದಾಗಿ ಇದಕ್ಕೆ ಬೇಕಾದ ಎಲ್ಲ ಕಾರ್ಯವೈಖರಿಯನ್ನು ರಚಿಸಿಕೊಂಡಿರುವುದಾಗಿ ತಿಳಿಸಿದರು.

ಬೆಂಗಳೂರು ಜಿಲ್ಲಾಧ್ಯಕ್ಷ ಶಶಿಕಾಂತ ಪೂಜಾರಿ,ಬೆಂಗಳೂರು ನಗರ ಜಿಲ್ಲೆಯ ಉಪಾಧ್ಯಕ್ಷ ಹರೀಶ್, ಯುವ ಘಟಕ ಅಧ್ಯಕ್ಷ ಎಂ.ನಾಗರಾಜ್ ಮತ್ತಿತರರು ಹಾಜರಿದ್ದರು.

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ