ವಿಲ್ಸನ್ ಗಾರ್ಡನ್ ವಿದ್ಯಾ ಸಂಸ್ಥೆ : ನೂತನ ಪ್ರಯೋಗ ಶಾಲೆ ಉದ್ಘಾಟನೆ ತಾರಾ ಅನುರಾಧ

 

ವಿಲ್ಸನ್ ಗಾರ್ಡನ್ ವಿದ್ಯಾ ಸಂಸ್ಥೆ : ನೂತನ ಪ್ರಯೋಗ ಶಾಲೆ ಉದ್ಘಾಟನೆ ತಾರಾ ಅನುರಾಧ

ಬೆಂಗಳೂರು: ಸರಕಾರವು ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನವನ್ನು ನನಗೆ ನೀಡಿ ನೇಮಿಸಿತ್ತು. ಆದರೆ ಅತ್ಯಂತ ನಷ್ಟದಲ್ಲಿ ಇದ್ದ ನಿಗಮವು ಮುಚ್ಚುವ ಹಂತದಲ್ಲಿ ಇತ್ತು‌. ಪಾರದರ್ಶಕ ಆಡಳಿತ ನೀಡಿ ಲಾಭದತ್ತ ಮುನ್ನಡೆಸಿದ್ದೇನೆ ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ತಾರಾ ಅನುರಾಧ ರವರು ಹೇಳಿದರು.


ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಹೊಂಬೇಗೌಡನಗರ ವಾರ್ಡ್‌ನ ಹೊಂಬೇಗೌಡ ಬಾಲಕರ ಫ್ರೌಡಶಾಲೆಗೆ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಸಿ.ಎಸ್.ಆರ್.ಅನುದಾನದ ಅಡಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನೂತನವಾಗಿ ನಿರ್ಮಿಸಿರುವ “ವಿಜ್ಞಾನ ಪ್ರಯೋಗ ಶಾಲೆ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದೀಗ ನಮ್ಮ ಸಂಸ್ಥೆಯ ವತಿಯಿಂದ ಹತ್ತು ಲಕ್ಷ ರೂಪಾಯಿಗಳ ಅನುದಾನವನ್ನು ಈ ಶಾಲೆಯ ವಿಜ್ಞಾನ ಶಾಲೆಯ ನಿರ್ಮಾಣಕ್ಕೆ ನೀಡಲಾಗಿದೆ.
ಮಕ್ಕಳಿಗೆ ವಿಜ್ಞಾನವಿಲ್ಲದೇ ಸಮಾಜದ ಪ್ರಗತಿಯಾಗುವುದಿಲ್ಲ, ತಂತ್ರಜ್ಞಾನದ ಜೊತೆಯಲ್ಲಿ ವಿಜ್ಞಾನದ ಜ್ಞಾನವನ್ನು ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಮ್ಮದು ಎಂದು ಹೇಳಿದರು. ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ನಿರ್ದೇಶಕರಾದ
ಭಾಗ್ಯವತಿ ಅಮರೇಶ್ ರವರು ಮಾತನಾಡಿ ಮಕ್ಕಳಿಗೆ ಜ್ಞಾನ ಮುಖ್ಯ, ಜ್ಞಾನ ಲಭಿಸಬೇಕಾದರೆ ವಿದ್ಯೆ ಮುಖ್ಯ.
ಹೊಂಬೇಗೌಡನಗರ ವಾರ್ಡ್ ನಲ್ಲಿ ಸರ್ಕಾರಿ ಮತ್ತು ಬಿಬಿಎಂಪಿ ಶಾಲೆಗಳ ಅಭಿವೃದ್ದಿಗೆ ಸ್ಲಂ ಸಂಸ್ಥೆ ಮತ್ತು ಗರುಡಾ ಫೌಂಡೇಷನ್ ನಿಂದ ಸತತವಾಗಿ ಶಿಕ್ಷಣಕ್ಕೆ ಒತ್ತು ನೀಡಿಲಾಗುತ್ತಿದೆ. ಮಕ್ಕಳಿಗೆ ಉಚಿತ ಕಂಪ್ಯೂಟರ್ ತರಬೇತಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ 40ಲ್ಯಾಪ್ ಟಾಪ್ ವಿತರಿಸಲಾಗಿದೆ. ಹಾಗೆಯೇ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನನ್ನು ಸಹ ನೀಡಲಾಗುತ್ತಿದೆ. ಶ್ರೀಮಂತರ ಮಕ್ಕಳಿಗೆ ಸಿಗುವ ಶಿಕ್ಷಣವು ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬದ ಮಕ್ಕಳಿಗೆ ಸಿಗಬೇಕು ಎಂಬುದು ನಮ್ಮ ಆಶಯವಾಗಿದೆ.
ಈ ನಿಟ್ಟಿನಲ್ಲಿ ನಮ್ಮ ಅರಣ್ಯ ಅಭಿವೃದ್ದಿ ನಿಗಮ ಶಿಕ್ಷಣಕ್ಕೆ ಒತ್ತು ನೀಡಿ ನೂತನ ವಿಜ್ಞಾನ ಪ್ರಯೋಗ ಶಾಲೆಗೆ ಸಿ.ಎಸ್.ಆರ್ ಅನುದಾನ ನೀಡಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ರಾಧಾ ದೇವಿ
ಮಾಹಿತಿ ಹಕ್ಕು ಅದ್ಯಯನ ಸಂಸ್ಥೆಯ ಟ್ರಸ್ಟಿಗಳಾದ ಅಂಬರೀಶ್(ಅಮರೇಶ್), ವಿಲ್ಸನ್ ಗಾರ್ಡನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶರತ್ ಚಂದ್ರ, ಕಾರ್ಯದರ್ಶಿ ಜಗದೀಶ್ ರೆಡ್ಡಿ, ಸದಸ್ಯರಾದ ಮಂಜುನಾಥ್ ಹಾಗೂ ಶಾಲೆಯ ಮಕ್ಕಳು ಪಾಲ್ಗೊಂಡಿದ್ದರು.

Comments

Popular posts from this blog

Methodist Church in India Announces New Leadership, Disputes Former Bishop’s Claims

ಬೆಂಗಳೂರಿನಲ್ಲಿ ಡಿಸೆಂಬರ್ 14, 15ರಂದು ಮೂರನೇ ಆವೃತ್ತಿಯ ಜಾಗತಿಕ ಯೋಗ ಶೃಂಗ

BHARATIYA JAIN SANGHATANA Women’s Wing, Bengaluru Chapter PRESENTS”VANDE MATARAM”The Pride of Nation