ಇಂದು ಚುನಾವಣೆ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ನಡೆಸಲಿರುವ ಬಿಜೆಪಿ...!
ಇಂದು ಚುನಾವಣೆ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ನಡೆಸಲಿರುವ ಬಿಜೆಪಿ...!

9
ಬೆಂಗಳೂರು : ಚುನಾವಣೆ ಸೋಲಿನ ಬಗ್ಗೆ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಲಿದ್ದು, ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಸಭೆ ನಡೆಯಲಿದೆ. ಕಮಲ ನಾಯಕರು ಇಂದು ಸಂಜೆ 4 ಗಂಟೆಗೆ ಮೀಟಿಂಗ್ ನಡೆಸಲಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಮಾಜಿ ಸಿಎಂ ಬೊಮ್ಮಾಯಿ ಹಾಗೂ ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು ಮೀಟಿಂಗ್ನಲ್ಲಿ ಭಾಗಿಯಾಗಲಿದ್ದಾರೆ. ಚುನಾವಣೆಯಲ್ಲಿ ಸೋಲಿನ ಕಾರಣಗಳ ಕುರಿತು ನಾಯಕರು ಚರ್ಚೆ ನಡೆಸಲಿದ್ದು, ಕೇಸರಿ ನಾಯಕರು ನೈಜ ಕಾರಣಗಳ ಬಗ್ಗೆ ವಿವರಣೆ ಪಡೆಯಲಿದ್ದಾರೆ.
Comments
Post a Comment