ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟ 7ನೆ ಜನವರಿ, 2025 ರಿಂದ
ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟ 7ನೆ ಜನವರಿ, 2025 ರಿಂದ
ಫ್ರೀಡಂ ಪಾರ್ಕ್,
ವಿಷಯ : ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ. 15,000 ನಿಶ್ಚಿತ ಗೌರವಧನ ನೀಡಬೇಕು ಎನ್ನುವ ಬಹುದಿನಗಳ ಬೇಡಿಕೆಯೂ ಸೇರಿದಂತೆ ವಿವಿಧ ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ
ಆಶಾ ಕಾರ್ಯಕರ್ತೆಯರು ಹಗಲಿರುಳು ಬಡಜನರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಿ ಕೊಡಲು ಆರೋಗ್ಯ ಇಲಾಖೆಯಲ್ಲಿ ಪರಿಶ್ರಮಿಸುತ್ತಿರುವುದು ನಿಮಗೆ ತಿಳಿದಿದೆ. ರಾಜ್ಯದಲ್ಲಿ ಸುಮಾರು 42,000 ಆಶಾ ಕಾರ್ಯಕರ್ತೆಯರು ಮಹತ್ತರವಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸಿ ಸಮಗ್ರ ಅಭಿವೃದ್ಧಿಯ ಕುರಿತು ಸಮಾಜದ ಆರೋಗ್ಯಕರ ಬದಲಾವಣೆಗೆ ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ. ಹಾಗೆಯೇ ಕೋವಿಡ್-19 ಸಂದರ್ಭದಲ್ಲಿ ಈ ಫ್ರಂಟ್ ಲೈನ್ ವಾರಿಯರ್ಸ್ ಆಗಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆಯಿಂದ ಹಿಡಿದು ಎಲ್ಲರೂ ಶ್ಲಾಘಿಸಿದ್ದಾರೆ.
ಈ ಅಸಹಾಯಕ ಬಡ ಮಹಿಳೆಯರು, ವಿಧವೆಯರು, ವಿಚ್ಛೇದಿತರನ್ನು 'ಆಶಾ' ಗಳನ್ನಾಗಿ ನೇಮಕ ಮಾಡಿಕೊಂಡು ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲಾಗುತ್ತದೆ ಎಂಬುದು ಸರ್ಕಾರದ ಘೋಷಣೆ. ಆದರೆ ಆಶಾಗಳ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕುತ್ತಿಲ್ಲವೆಂಬುದು ವಾಸ್ತವ. ರಾಜ್ಯದಲ್ಲಿ ಪ್ರೋತ್ಸಾಹಧನ ನೀಡಲು "ಆಶಾನಿಧಿ ಪೋರ್ಟಲ್ನಲ್ಲಿ ಆನ್ಸೆನ್ ದಾಖಲು ಮಾಡಬೇಕಿದ್ದು, ಆಶಾಗಳು ಮಾಡಿದ ಕೆಲಸಗಳು ದಾಖಲಾಗದೆ ಕಳೆದ 8 ವರ್ಷಗಳಿಂದ ಮಾಡಿದ ಕೆಲಸಕ್ಕೆ ಪ್ರೋತ್ಸಾಹಧನ ಸಿಗುತ್ತಿಲ್ಲ. ಹಲವಾರು ಸಮಸ್ಯೆಯಿಂದ ಆಶಾ ಕಾರ್ಯಕರ್ತೆಯರಿಗೆ ಬಹು ದೊಡ್ಡ ಪ್ರಮಾಣದ ಅನ್ಯಾಯ ಆಗುತ್ತಿದೆ" ಸಮಸ್ಯೆಗಳ ಕುರಿತು ಪಿಎಚ್ಸಿ, ತಾಲೂಕು, ಜಿಲ್ಲೆಯಿಂದ ಹಿಡಿದು ಆರೋಗ್ಯ ಇಲಾಖೆ ಮತ್ತು ಸರ್ಕಾರಕ್ಕೆ ಕಳೆದ 8-9 ವರ್ಷಗಳಿಂದ ಲೆಕ್ಕವಿಲ್ಲದಷ್ಟು ದೂರುಗಳನ್ನು ಸಲ್ಲಿಸಲಾಗಿದೆ. ಲೆಕ್ಕವಿಲ್ಲದಷ್ಟು ಸಭೆಗಳು, ಚರ್ಚೆಗಳು, ನಡೆದಿವೆ.
1ಇಲಾಖೆಯಿಂದ ಕೈಗೊಂಡ ಯಾವುದೇ ಕ್ರಮದಿಂದ ಸಮಸ್ಯೆಗಳು ಪರಿಹಾರವಾಗದೇ ಹಾಗೆಯೇ ಉಳಿದಿವೆ. ಅದರಿಂದಾಗಿ ప్రకియాబ్బ రాజా కావరాలు మా అభికాల కప్ప భవిరురు. అగరువ నక్షనన్నూ శార్ భరగపోతాం. ఓనాల్ ಸಮಸ್ಯೆಯನ್ನು ಪರಿಹರಿಸಲು, ರಾಜ್ಯ ಸರ್ಕಾರ ಈಗ ನೀಡುತ್ತಿರುವ ರೂ.5000 ಮಾಸಿಕ ನಿಶ್ಚಿತ ಗೌರವರನ ಮತ್ತು ವಿವಿಧ ಚಿಟುವಟಿಕೆಗಳಿಗೆ ಕೇಂದ್ರ ಸರ್ಕಾರದಿಂದ ಇರುವ ಸುಮಾರು ರೂ.700 ಪ್ರೋತ್ಸಾಪದನ (ಆಶಾ ಸಾಫ್ಟ್ ಆನ್ ಲೈನ್ ಸಮಸ್ಯೆಯಿಂದ ಕೇಂದ್ರದ ಈ ಪ್ರೋತ್ಸಾಹಧನ ಸಂಪೂರ್ಣ ಬರುತ್ತಿಲ್ಲ. ಇದರಲ್ಲಿ ಕೇವಲ ಶೇ. 40-75 ಮಾತ್ರ ಬರುತ್ತದೆ) ಹಾಗೂ ರಾಜ್ಯ ಸರ್ಕಾರದ ಪ್ರತಿಷ್ಠೆಯ ಐದು ಗ್ಯಾರಂಟಿಗಳ ಜೊತೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆಯ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, ದಿ: 13-14 ಶಬವರಿ 2024 ರಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಅನಿರ್ದಿಷ್ಟ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ಹೋರಾಟದ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ನನ್ನನ್ನು ನಂಬಿ, ಹೋರಾಟ ಹಿಂತೆಗೆದುಕೊಳ್ಳಿ, ಮುಂದಿನ ಕೆಲವೇ ದಿನಗಳಲ್ಲಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿರುತ್ತಾರೆ' ಆದೇ ರೀತಿ ಮಾನ್ಯ ಉಪ ಮುಖ್ಯಮಂತ್ರಿಗಳೂ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದರು, ನಂತರದ ದಿನಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು, ಇಲಾಖೆಯ ಸಚಿವರು, ಸಮಸ್ಯೆಗಳನ್ನು ಬಗೆಹರಿಸಿರುವುದಿಲ್ಲ. పెరువ రూ. 3000 గళన్ను ఒట్టుగుడ ంఒక రూం. 15,000 గొరజలన విగది దూరాజీలకు మత్తు ఇకర ఎల్ల
ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಎ.ಸಿ.ಎಸ್ ಅವರ ಜೊತೆಯಲ್ಲಿ 2 ಬಾರಿ ಸಭೆಗಳು, ಮಾನ್ಯ ಆರೋಗ್ಯ ಸಚಿವರು. ಆರೋಗ್ಯ ಇಲಾಖೆ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಆಯುಕ್ತರು, ಎಂ.ಡಿ, ಎನ್.ಎಚ್.ಎಂ ಸೇರಿದಂತೆ ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳ ಜೊತೆಯಲ್ಲಿ ಫೆಬ್ರುವರಿ ಹೋರಾಟದ ನಂತರ ಕಳೆದ 11 ತಿಂಗಳುಗಳ ಅವಧಿಯಲ್ಲಿ ಸರ್ಕಾರ ಮತ್ತು ಇಲಾಖೆಯ ಜೊತೆಯಲ್ಲಿ 15 ಕ್ಕೂ ಹೆಚ್ಚು ರಾಜ್ಯ ಮಟ್ಟದ ಸಭೆಗಳು ನಡೆದಿವೆ. ರಾಜ್ಯದ 11 ಜಿಲ್ಲೆಗಳಲ್ಲಿ ಕಾರ್ಯಕರ್ತೆಯರು ಲೆಕ್ಕವಿಲ್ಲದಷ್ಟು ಸಂದರ್ಭಗಳಲ್ಲಿ ಸರ್ಕಾರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸಚಿವರು, ಶಾಸಕರು ಮತ್ತು ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಮಸ್ಯೆ ಪರಿಹರಿಸಿ ಎಂದು ಕೋರಿಕೊಂಡಿದ್ದಾರೆ. ಆಣಾ ಕಾರ್ಯಕರ್ತೆಯರ ಮಾಸಿಕ ಕನಿಷ್ಠ ಗೌರವಧನವೂ ಸೇರಿದಂತೆ ಇತರ ಪ್ರಮುಖ ಬೇಡಿಕೆಗಳಲ್ಲಿ ಯಾವೊಂದೂ ಸಮಸ್ಯೆಗೆ ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ಮತ್ತು ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಹೇಳಲು ಇಚ್ಛಿಸುತ್ತೇವೆ. ನಮ್ಮ ಎಲ್ಲಾ ಪ್ರಯತ್ನದ ಹೊರತಾಗಿಯೂ ಸರ್ಕಾರ ನಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ.
ಆಶಾ ಕಾರ್ಯಕರ್ತೆಯರು ಎಂತಹ ಮಹತ್ವದ ಸೇವೆಯಲ್ಲಿ ತೊಡಗಿದ್ದಾರೆ ಎಂದು ತಮಗೆ ತಿಳಿದಿದೆ. ಹಗಲಿರುಳು ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ಅವರಿಗೆ ಕನಿಷ್ಟ ಜೀವನ ನಡೆಸುವಷ್ಟು ಗೌರವಧನ ಇಲ್ಲ ಎನ್ನುವುದು ಕೂಡಾ ತಮಗೆ ತಿಳಿದಿದೆ. ಕೆಳಗಿನ ಬಹುದಿನಗಳ ಪ್ರಮುಖ ಬೇಡಿಕೆಗಳನ್ನು ನಡೇರಿಸಬೇಕು ಎಂದು ಅನಿವಾರ್ಯವಾಗಿ ಅನಿರ್ದಿಷ್ಟ ಹೋರಾಟಕ್ಕೆ ಮುಂದಾಗಿರುವರು. ದಿ. 7-01-2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಹೋರಾಟ ನಡೆಯಲಿದೆ. ಬೆಳಗಾವಿ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಹಲವಾರು ಸಚಿವರು, ನೂರಾರು ಶಾಸಕರಿಗೆ ಮನವಿ ನೀಡಲಾಗಿತ್ತು. ಈ ಕುರಿತು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ಆಗಿದೆ. ಸರ್ಕಾರ ನಮ್ಮ ಬೇಡಿಕೆಗಳ ಬಗ್ಗೆ ಬಹಳ ಅನುಕಂಪದಿಂದ ಇರುವ ಇಂಗಿತವನ್ನು ವ್ಯಕ್ತವಾಗಿದೆ. ಆದರೆ ಪರಿಹಾರ ಮಾತ್ರ ಮರೀಚಿಕೆ ಆಗಿದೆ. ಈಗ ಕಳೆದ 8-9 ವರ್ಷಗಳಿಂದ ಆಗಿರುವ ಅನ್ಯಾಯಕ್ಕೆ ತಾಳೆ ಮೀರಿ ಉನ್ನತ ಹಂತದ ಹೋರಾಟಕ್ಕೆ ಅಣಿಯಾಗಿರುವರು. ಆಶಾ ಕಾರ್ಯಕರ್ತೆಯರ ಈ ಕೆಳಕಂಡ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸಂಯೋಜಿತ "ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ"ದಿಂದ ಆಗ್ರಹಿಸುವ ಈ ಹೋರಾಟಕ್ಕೆ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರನ್ನು 'ಪಿಂಕ್ ಸಿಟಿ'ಯಾಗಿಸಲು ಮುನ್ನುಗ್ಗುತ್ತಿರುವರು. ರಾಜ್ಯ ಎಲ್ಲಾ ಜನತೆ ಇವರ ಸೇವೆಗೆ, ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಬೆಂಬಲಿಸಬೇಕೆಂದು ಮತ್ತು ಆಶಾ ಕಾರ್ಯಕರ್ತೆಯರು ಯಾವುದೇ ಗೊಂದಲಕ್ಕೆ ಒಳಗಾಗದೆ ಒಗ್ಗಟ್ಟಿನಿಂದ ಹೋರಾಟಕ್ಕೆ ಸಿದ್ದರಾಗಿ ಬರಲು ಸಂಘದಿಂದ ಈ ಮೂಲಕ ಕರೆ ನೀಡುತ್ತೇವೆ.
ಪ್ರಮುಖ ಹಕ್ಕೊತ್ತಾಯಗಳು
1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ, ಒಟ್ಟು ರೂ. 15000 ಮಾಸಿಕ ಗೌರವಧನ ನಿಗದಿಯಾಗಬೇಕು.
2. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ ರೂ.2000ರಷ್ಟು ಗೌರವಧನವನ್ನು ಹೆಚ್ಚಿಗೆ ಮಾಡಬೇಕು.
3. ರಾಜ್ಯದಾದ್ಯಂತ ಬಾಕಿ ಇರುವ 2-3 ತಿಂಗಳ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಕೂಡಲೇ ಬಿಡುಗಡೆ ಮಾಡಿ,
4. ಆಹಾ ಕಾರ್ಯಕರ್ತೆಯರು ಸ್ಮಾರ್ಟ್ ಫೋನ್ ಬಳಕೆ ಬಗ್ಗೆ ದಿ: 28-11-2024 ರಂದು ಹೊರಡಿಸಿದ ಅಧಿಕೃತ ಜ್ಞಾಪನಾ ಪತ್ರ (ಎಸ್.ಎನ್.ಓ (ಆಶಾ)/41/2023-24 ವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು. ಆಶಾಗಳವಲ್ಲದ ಕೆಲಸವನ್ನು ಅಧಿಕೃತವಾಗಿ ಮಾಡಲು ಹೇಳಿರುವ ಆದೇಶ ವಾಪಾಸಾಗಲೇಬೇಕು.
5. ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ ಅಥವಾ ಮೊಬೈಲ್ ಡಾಟಾ ಒದಗಿಸಿ, ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿ ಮಾಡಿ. ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೊ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ.
6. ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ ರೂ.5 ಲಕ್ಷಕ್ಕೆ ಹೆಚ್ಚಿಸುವುದು.
7. ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು, ಆತಾ ಸೇವೆಯಲ್ಲಿ ಇದ್ದಾಗ ಆಗುವ ಅನಾಹುತಗಳಿಗೆ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ವಹಿಸಿಕೊಳ್ಳಬೇಕು.
8. ಪ್ರತೀ ವರ್ಷ ಪ್ರತೀ ಆಶಾ ಕಾರ್ಯಕರ್ತೆಗೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಮಾಡಬೇಕು.
9. ಈ ಬಾರಿಯ ಆರ್ಒಪಿ 2024-26 ನಲ್ಲಿ ಅನುಮೋದನೆಯಾದಂತೆ ಇದೇ ಏಪ್ರಿಲ್ 2024ರಿಂದ ಆಶಾ ಸುಗಮಕಾರರಿಗೆ ರೂ.7500 ರಂತೆ ಗೌರವಧನ ನೀಡಿ ಹಲವಾರು ಜಿಲ್ಲೆಗಳಲ್ಲಿ 3-4 ತಿಂಗಳಿಂದ ಬಾಕಿ ಉಳಿದಿರುವ ಸುಗಮಕಾರರ ಗೌರವಧನ ಕೂಡಲೇ ನೀಡಿ
10. ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಚ್ಯುಟಿ, ಪಿಎಫ್-ಇಎಸ್ಐ ಸೌಲಭ್ಯ ನೀಡಿರಿ.

Comments
Post a Comment