ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ 7 ದಿನಗಳ “ಉರೂಸ್ ಮುಬಾರಕ್” – ಭಕ್ತರ ಪಾಲಿಗೆ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಮಾಗಮ

 ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ 7 ದಿನಗಳ “ಉರೂಸ್ ಮುಬಾರಕ್” – ಭಕ್ತರ ಪಾಲಿಗೆ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಮಾಗಮ

ಬೆಂಗಳೂರು , ಜನವರಿ 29, 2025: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಪ್ರತಿವರ್ಷ ಹಮ್ಮಿಕೊಳ್ಳುವ ಪವಾಡ ಪುರುಷರಾದ ಬಹು. ಹುತ್ ಸೂಫಿ ಶಹೀದ್ (ರ) ಹಾಗೂ ಸೈಯದ್ ಹಸನ್ ಸಖಾಫ್ ಅಲ್ ಹಳರಮಿ (ರ) ಯವರ ನೆನಪಿಗಾಗಿ ನಡೆಯುವ “ಉರೂಸ್ ಮುಬಾರಕ್” ಈ ಬಾರಿ ಫೆಬ್ರವರಿ 21 ರಿಂದ 28, 2025ರವರೆಗೆ ನಡೆಯಲಿದೆ.

ಈ ಮಹೋತ್ಸವದಲ್ಲಿ ಖತಮುಲ್ ಖುರಾನ್, ಧಾರ್ಮಿಕ ಉಪನ್ಯಾಸಗಳು, ಸಾಮೂಹಿಕ ವಿವಾಹ, ಸಾರ್ವಜನಿಕ ಸಮ್ಮೇಳನ ಮತ್ತು ಸಮಾರೋಪ ಸಮಾರಂಭ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಜಾತಿ-ಮತ ಭೇದವಿಲ್ಲದೆ ಸಾವಿರಾರು ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಫೆಬ್ರವರಿ 24, 2025ರಂದು ಆಗಮಿಸುವ ಭಕ್ತರು ಹಾಗೂ ಭಾಂದವರಿಗಾಗಿ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ತಾಜುಲ್ ಇಸ್ಲಾಂ ಮುಸ್ಲಿಂ ಜಮಾ-ಅತ್ನ ಅಧೀನದಲ್ಲಿ ಆಯೋಜಿಸಲಾಗುತ್ತಿದೆ.

ಸಯ್ಯದ್ ಕುಟುಂಬದ ನೇತೃತ್ವದ ಧಾರ್ಮಿಕ ಪಂಡಿತರು, ರಾಜ್ಯ ಹಾಗೂ ಹೊರರಾಜ್ಯಗಳಿಂದ ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ನಾಯಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

400 ವರ್ಷಗಳ ಪರಂಪರೆಯ ಮಹತ್ವ:

ಹಿಜ್ರಿ 11ನೇ ಶತಮಾನದಲ್ಲಿ, ಇಸ್ಲಾಂನ ನವೋತ್ಥಾನ ನಾಯಕರು ಈಜಿಪ್ಟ್ ನಿಂದ ಪ್ರವಾದಿ (ಸ)ವರ ಝಿಯಾರತ್ ಮುಗಿಸಿ ಧರ್ಮಪ್ರಚಾರಕ್ಕಾಗಿ ಕೊಡಗು ತಲುಪಿದರು. ಕೊನೆಗೆ, ಎಮ್ಮೆಮಾಡು ಗ್ರಾಮದಲ್ಲಿ ಅಂತ್ಯವಿಶ್ರಾಂತಿ ಪಡೆದ ಈ ಔಲಿಯಾಗಳ ದರ್ಗಾ ಜನರ ಸಂಕಟಗಳಿಗೆ ಪರಿಹಾರ ದೊರಕುವ ಪುಣ್ಯಸ್ಥಳವಾಗಿ ಬೆಳೆಯುತ್ತಿದೆ.

ಈ ಕಾರ್ಯಕ್ರಮದ ಕುರಿತು ಪತ್ರಿಕೆಗಳು ಹಾಗೂ ಟಿವಿ ಮಾಧ್ಯಮಗಳು ಹೆಚ್ಚಿನ ಪ್ರಚಾರ ನೀಡಬೇಕು ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರುನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅಬೂಬಕ್ಕರ್ ಸಕಾಫಿ, ಅಧ್ಯಕ್ಷರು ಮನವಿ ಮಾಡಿದರು.

ಈ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಜಮಾ-ಅತ್ ಸದಸ್ಯರನ್ನು ಸಂಪರ್ಕಿಸಲು 7204882008.

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ