ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು – ಸಂಘಟನೆ ಒತ್ತಾಯ
ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು – ಸಂಘಟನೆ ಒತ್ತಾಯ

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಿಸಬೇಕೆಂದು ವಿಶ್ವಜ್ಞಾನಿ ಡಾ|. ಬಿ.ಆರ್. ಅಂಬೇಡ್ಕರ್ ರಾಜ್ಯ ಹೋರಾಟ ಸೇನೆ (ರಿ.) ಒತ್ತಾಯಿಸಿದೆ. ರಾಜ್ಯದ ಅಭಿವೃದ್ಧಿ ಮತ್ತು ಕಾಂಗ್ರೆಸ್ ಸಂಘಟನೆಗೆ ಅವರ ನಾಯಕತ್ವ ಅಗತ್ಯವಿದೆ ಎಂದು ಸಂಘಟನೆಯ ಸುಮಾ ಬಸವಲಿಂಗಯ್ಯ, ಸಂಸ್ಥಾಪಕ ಅಧ್ಯಕ್ಷರು ಮತ್ತು ಎಸ್ ಬಿ. ಮಲ್ಲಿಕಾರ್ಜುನ ಸ್ವಾಮಿ ಹೋರಾಟ ಸೇನೆಯ ವತಿಯಿಂದ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಶ್ರೀ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿ, ಬೂತ್ ಮಟ್ಟದಿಂದ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಎಲ್ಲ ವರ್ಗಗಳ ಜನರ ಬೆಂಬಲವನ್ನು ಅವರು ಹೊಂದಿದ್ದಾರೆ. ಹೀಗಾಗಿ, ರಾಜ್ಯದ ಮುಂದಿನ ಚುನಾವಣೆಗಳ ದೃಷ್ಟಿಯಿಂದ ಅವರ ನಾಯಕತ್ವ ಅತ್ಯಗತ್ಯ,” ಎಂದರು.
ರಾಜ್ಯದಲ್ಲಿ ಇತ್ತೀಚೆಗೆ ಉಂಟಾಗಿರುವ ರಾಜಕೀಯ ಅನಿಶ್ಚಿತತೆ ಮತ್ತು ಅಸಮಾಧಾನವನ್ನು ಸರಿಪಡಿಸಲು, ಕಾಂಗ್ರೆಸ್ ಉನ್ನತ ನಾಯಕತ್ವ ತಕ್ಷಣ ಕ್ರಮ ಕೈಗೊಳ್ಳಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಖರ್ಗೆ ಅವರ ಮಾರ್ಗದರ್ಶನದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಬೇಕು ಎಂಬುದು ಸಂಘಟನೆಯ ಹಿತದೃಷ್ಟಿಯಾಗಿದೆ ಎಂದು ಅವರು ಹೇಳಿದರು.
Comments
Post a Comment