ಹೊರಗುತ್ತಿಗೆ ನೌಕರರ ಕಡ್ಡಾಯ ಸೇವಾ ಭದ್ರತೆಗೆ ಕಾನೂನು ಹೋರಾಟ ; ಹೊರ ಗುತ್ತಿಗೆ ನೌಕರರ ಎಚ್ಚರಿಕೆ.

 ಹೊರಗುತ್ತಿಗೆ ನೌಕರರ ಕಡ್ಡಾಯ ಸೇವಾ ಭದ್ರತೆಗೆ ಕಾನೂನು ಹೋರಾಟ ; ಹೊರ ಗುತ್ತಿಗೆ ನೌಕರರ ಎಚ್ಚರಿಕೆ.

ಬೆಂಗಳೂರು ಫೆಬ್ರವರಿ 15; ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕಡ್ಡಾಯವಾಗಿ ಸೇವಾ ಭದ್ರತೆ ಒದಗಿಸಬೇಕು ಇಲ್ಲವಾದರೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ ಒತ್ತಾಯಿಸಿದೆ.

ಪ್ರೆಸ್ ಕ್ಲಬ್ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಸುಧಾಕರ್ ಈಗಾಗಲೇ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಅದೇ ಹುದ್ದೆ ಹಾಗೂ ಅದೇ ಇಲಾಖೆಯ ಕಚೇರಿಯಲ್ಲಿ ಮುಂದುವರೆಸುವ ಕುರಿತು ಕ್ರಮ ಕೈಗೊಳ್ಳ ಬೇಕು ಎಂದು ಹೇಳಿದರು.

ಹೊರಗುತ್ತಿಗೆ ನೌಕರರ ನಿಯೋಜನೆ ಅವಧಿಯನ್ನು 6ತಿಂಗಳ ಬದಲಾಗಿ ಕನಿಷ್ಠ ಒಂದು ವರ್ಷ ನಿಗದಿಪಡಿಸಬೇಕು, ಸರ್ಕಾರದ ಅನುದಾನದ ನೆಪ ಹೇಳದೆ ಕಡ್ಡಾಯವಾಗಿ ಪ್ರತಿ ತಿಂಗಳ ವೇತನ ಮತ್ತು ಇಪಿಎಫ್ ಹಾಗೂ ಇಎಸ್ ಐ ಪಾವತಿಸಬೇಕು ,ಕಾರ್ಮಿಕ ಇಲಾಖೆ ಸುತ್ತೋಲೆಯಂತೆ ಕನಿಷ್ಠ ವೇತನ ಹಾಗೂ ಇತರೆ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಬೇಕು, ಮಹಿಳಾ ನೌಕರರಿಗೆ ವಿಶೇಷ ರಜೆ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು

ಹೊರಗುತ್ತಿಗೆ ನೌಕರರ ಹಿತ ಕಾಯಲು ಸರ್ಕಾರ ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಂಘ ರಚನೆ ಮಾಡಿರುವುದು ಸ್ವಾಗತಾರ್ಹ ಎಂದರು.

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ