ಪೌರಕಾರ್ಮಿಕರ ಖಾಯಂ ಪ್ರಕ್ರಿಯೆಯನ್ನು ಲೋಕಾಯುಕ್ತ ತನಿಖೆ ಮುಕ್ತಾಯವಾಗುವವರೆಗೆ ತಡೆಹಿಡಿಯಬೇಕೆಂದು ಕೆ.ಜಿ. ಶ್ರೀನಿವಾಸ್ ಆಗ್ರಹ
Get link
Facebook
X
Pinterest
Email
Other Apps
ಪೌರಕಾರ್ಮಿಕರ ಖಾಯಂ ಪ್ರಕ್ರಿಯೆಯನ್ನು ಲೋಕಾಯುಕ್ತ ತನಿಖೆ ಮುಕ್ತಾಯವಾಗುವವರೆಗೆ ತಡೆಹಿಡಿಯಬೇಕೆಂದು ಕೆ.ಜಿ. ಶ್ರೀನಿವಾಸ್ ಆಗ್ರಹ
ಬೆಂಗಳೂರು, ಏಪ್ರಿಲ್ 28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿ.ಬಿ.ಎಂ.ಪಿ) 2005 ರಿಂದ 2017ರ ಅವಧಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಿದ ಪೌರಕಾರ್ಮಿಕರ ಇ.ಎಸ್.ಐ. ಮತ್ತು ಪಿ.ಎಫ್. ನಿಧಿಗಳ ಬಗ್ಗೆ ಉಂಟಾಗಿರುವ ಭಾರಿ ಅವ್ಯವಹಾರ ಕುರಿತು ಭ್ರಷ್ಟಾಚಾರ ನಿರ್ಮೂಲನೆ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು (ACB/ಬೆಂ.ನರಾ/ಮೊ.ಸಂಖ್ಯೆ 40/2017), ಪ್ರಸ್ತುತ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಸುಮಾರು ₹384 ಕೋಟಿ ಮೌಲ್ಯದ ಇ.ಎಸ್.ಐ. ಮತ್ತು ಪಿ.ಎಫ್. ನಿಧಿ, ಹಾಗೂ 6,600 ನಕಲಿ ಪೌರಕಾರ್ಮಿಕರ ವೇತನದ ರೂಪದಲ್ಲಿ ₹550 ಕೋಟಿ ಮೊತ್ತದ ವಂಚನೆಯ ಆರೋಪ ಕೇಳಿಬಂದಿದೆ.
ಈ ಸಂಬಂಧ ಈಗಾಗಲೇ ಬಿ.ಬಿ.ಎಂ.ಪಿಯಿಂದ ತಾತ್ಕಾಲಿಕ ತನಿಖಾ ತಂಡ ರಚನೆಗೊಂಡಿದ್ದು, ತನಿಖೆಗೆ ಸಹಕಾರ ನೀಡಲಾಗುತ್ತಿದೆ. ಆದರೆ, ನಕಲಿ ಪೌರಕಾರ್ಮಿಕರ ಪಟ್ಟಿ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಈ ಸಂದರ್ಭದಲ್ಲಿ ಪೌರಕಾರ್ಮಿಕರ ಖಾಯಂಗೊಳಿಸುವ ಪ್ರಕ್ರಿಯೆ ಆರಂಭಿಸಿದ್ದರೆ, ನೈಜವಾಗಿ ದುಡಿದ ಕಾರ್ಮಿಕರು ವಂಚಿತರಾಗುವ ಭೀತಿ ಇದೆ ಎಂದು ಕೆ.ಜಿ. ಶ್ರೀನಿವಾಸ್ ಅವರು ತಿಳಿಸಿದರು.
ಅವರು ಬೆಂಗ್ಳೂರಿನ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, “ಅನಧಿಕೃತವಾಗಿ ಗೈರುಹಾಜರಿರುವವರು ಮತ್ತು ಒಂದುವರ್ಷದೊಳಗಿನ ನೇರ ಪಾವತಿ ಪೌರಕಾರ್ಮಿಕರನ್ನೂ ಖಾಯಂಗೊಳಿಸುವ ಪ್ರಕ್ರಿಯೆಯಲ್ಲಿ ಪರಿಗಣಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದು ನ್ಯಾಯೋಚಿತವಲ್ಲ. ಪ್ರಕರಣದ ತನಿಖೆ ಮುಕ್ತಾಯವಾಗಿ, ನಕಲಿ ಪೌರಕಾರ್ಮಿಕರ ಪಟ್ಟಿ ಅಧಿಕೃತವಾಗಿ ಪ್ರಕಟವಾಗುವವರೆಗೆ ಪೌರಕಾರ್ಮಿಕರ ಖಾಯಂ ಪ್ರಕ್ರಿಯೆಯನ್ನು ತಕ್ಷಣ ತಡೆಹಿಡಿಯಬೇಕು,” ಎಂದು ಆಗ್ರಹಿಸಿದರು.
ಇದಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ತನಿಖಾ ತಂಡ ಹಾಗೂ ಬಿ.ಬಿ.ಎಂ.ಪಿಯ ಕಾನೂನು ವಿಭಾಗದ ಮುಖ್ಯಸ್ಥರೊಂದಿಗೆ ತಕ್ಷಣ ಜಂಟಿ ಸಭೆ ಕರೆಯಬೇಕು ಮತ್ತು ಖಾಯಂಗೊಳಿಸುವ ಪ್ರಕ್ರಿಯೆಯ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ಅವರು ಮನವಿ ಸಲ್ಲಿಸಿದರು.
ಬೆಂಗಳೂರು, ಏಪ್ರಿಲ್ 28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿ.ಬಿ.ಎಂ.ಪಿ) 2005 ರಿಂದ 2017ರ ಅವಧಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಿದ ಪೌರಕಾರ್ಮಿಕರ ಇ.ಎಸ್.ಐ. ಮತ್ತು ಪಿ.ಎಫ್. ನಿಧಿಗಳ ಬಗ್ಗೆ ಉಂಟಾಗಿರುವ ಭಾರಿ ಅವ್ಯವಹಾರ ಕುರಿತು ಭ್ರಷ್ಟಾಚಾರ ನಿರ್ಮೂಲನೆ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು (ACB/ಬೆಂ.ನರಾ/ಮೊ.ಸಂಖ್ಯೆ 40/2017), ಪ್ರಸ್ತುತ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಸುಮಾರು ₹384 ಕೋಟಿ ಮೌಲ್ಯದ ಇ.ಎಸ್.ಐ. ಮತ್ತು ಪಿ.ಎಫ್. ನಿಧಿ, ಹಾಗೂ 6,600 ನಕಲಿ ಪೌರಕಾರ್ಮಿಕರ ವೇತನದ ರೂಪದಲ್ಲಿ ₹550 ಕೋಟಿ ಮೊತ್ತದ ವಂಚನೆಯ ಆರೋಪ ಕೇಳಿಬಂದಿದೆ.
ಈ ಸಂಬಂಧ ಈಗಾಗಲೇ ಬಿ.ಬಿ.ಎಂ.ಪಿಯಿಂದ ತಾತ್ಕಾಲಿಕ ತನಿಖಾ ತಂಡ ರಚನೆಗೊಂಡಿದ್ದು, ತನಿಖೆಗೆ ಸಹಕಾರ ನೀಡಲಾಗುತ್ತಿದೆ. ಆದರೆ, ನಕಲಿ ಪೌರಕಾರ್ಮಿಕರ ಪಟ್ಟಿ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಈ ಸಂದರ್ಭದಲ್ಲಿ ಪೌರಕಾರ್ಮಿಕರ ಖಾಯಂಗೊಳಿಸುವ ಪ್ರಕ್ರಿಯೆ ಆರಂಭಿಸಿದ್ದರೆ, ನೈಜವಾಗಿ ದುಡಿದ ಕಾರ್ಮಿಕರು ವಂಚಿತರಾಗುವ ಭೀತಿ ಇದೆ ಎಂದು ಕೆ.ಜಿ. ಶ್ರೀನಿವಾಸ್ ಅವರು ತಿಳಿಸಿದರು.
ಅವರು ಬೆಂಗ್ಳೂರಿನ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, “ಅನಧಿಕೃತವಾಗಿ ಗೈರುಹಾಜರಿರುವವರು ಮತ್ತು ಒಂದುವರ್ಷದೊಳಗಿನ ನೇರ ಪಾವತಿ ಪೌರಕಾರ್ಮಿಕರನ್ನೂ ಖಾಯಂಗೊಳಿಸುವ ಪ್ರಕ್ರಿಯೆಯಲ್ಲಿ ಪರಿಗಣಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದು ನ್ಯಾಯೋಚಿತವಲ್ಲ. ಪ್ರಕರಣದ ತನಿಖೆ ಮುಕ್ತಾಯವಾಗಿ, ನಕಲಿ ಪೌರಕಾರ್ಮಿಕರ ಪಟ್ಟಿ ಅಧಿಕೃತವಾಗಿ ಪ್ರಕಟವಾಗುವವರೆಗೆ ಪೌರಕಾರ್ಮಿಕರ ಖಾಯಂ ಪ್ರಕ್ರಿಯೆಯನ್ನು ತಕ್ಷಣ ತಡೆಹಿಡಿಯಬೇಕು,” ಎಂದು ಆಗ್ರಹಿಸಿದರು.
ಇದಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ತನಿಖಾ ತಂಡ ಹಾಗೂ ಬಿ.ಬಿ.ಎಂ.ಪಿಯ ಕಾನೂನು ವಿಭಾಗದ ಮುಖ್ಯಸ್ಥರೊಂದಿಗೆ ತಕ್ಷಣ ಜಂಟಿ ಸಭೆ ಕರೆಯಬೇಕು ಮತ್ತು ಖಾಯಂಗೊಳಿಸುವ ಪ್ರಕ್ರಿಯೆಯ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ಅವರು ಮನವಿ ಸಲ್ಲಿಸಿದರು.
ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ ಆಳವಾದ ದುಃಖ ಮತ್ತು ಗಂಭೀರ ಕಳವಳದಿಂದ, ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮುಲಖೇಡಾ ಗ್ರಾಮದ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಅವರು 13 ಅಕ್ಟೋಬರ್ 2025 ರಂದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆಯ ವಿಷಯವನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇವೆ. ಅವರ ಅಕಾಲಿಕ ನಿಧನವು ರಾಜ್ಯದ ಗ್ರಂಥಾಲಯ ವಲಯದ ಜೊತೆಗೆ ಸಾರ್ವಜನಿಕ ಸೇವಾ ಸಮುದಾಯದೊಳಗೆ ಅಪಾರ ಆಘಾತವನ್ನುಂಟುಮಾಡಿದೆ. ಬೆರ್ಸ್ ಶ್ರೀಮತಿ ಭಾಗ್ಯವತಿ ಮಠ ಅವರು ಕಳೆದ ಆರು ವರ್ಷಗಳಿಂದ ಅನೇಕ ವೃತ್ತಿಜೀವನ ಹಾಗೂ ಆರ್ಥಿಕ ಸಂಕಷ್ಟಗಳ ನಡುವೆಯೂ ಅತ್ಯಂತ ಪ್ರಾಮಾಣಿಕತೆ. ನಿಷ್ಠೆ ಮತ್ತು ಬದ್ಧತೆಯೊಂದಿಗೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಮೂರು ತಿಂಗಳಿಂದ ಅವರಿಗೆ ವೇತನ ನೀಡದಿರುವುದು ಅತ್ಯಂತ ದುಃಖದ ವಿಷಯವಾಗಿದೆ. ಇದರಿಂದ ಅವರು ಮಾನಸಿಕ ಮತ್ತು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಸಾಕ್ಷರತೆ ಮತ್ತು ಅಧ್ಯಯನವನ್ನು ಉತ್ತೇಜಿಸಲು ಸರ್ಕಾರದಿಂದ ನಿಯೋಜಿಸಲ್ಪಟ್ಟ ಅಧಿಕಾರಿಯನ್ನು ಇಂತಹ ನಿರ್ಲಕ್ಷ್ಯ ಹಾಗೂ ಅನಾಸಕ್ತಿ ತೋರಿಸುವುದು ಅಸ್ವೀಕಾರಾರ್ಹ ಮತ್ತು ಹೃದಯವೇದಕವಾಗಿದೆ. ಅವರ ಆತ್ಮಹತ್ಯೆ ಪತ್ರದಲ್ಲಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಹಾಗೂ ಇತರ ಅಧಿಕಾರಿಗಳ ಹೆಸರುಗಳನ...
ಸಿಬಿಎಸ್ಇ ಮಾದರಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ" ಕರ್ನಾಟಕ ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಓದುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಸಿಬಿಎಸ್ ಇ, ಐಸಿಎಸ್ಇ ಹಾಗೂ ಇತರೆ ರಾಜ್ಯಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಉತ್ತೀರ್ಣತೆಯ ಮಾನದಂಡದಂತೆ ರಾಜ್ಯ ಪಠ್ಯಕ್ರಮದ ಶಾಲೆಗಳ ಎಸ್ಎಸ್ಎಲ್ಸಿ ಉತೀರ್ಣತೆಯ ಮಾನದಂಡವನ್ನು ಆಂತರಿಕ ಅಂಕಗಳು ಸೇರಿದಂತೆ ಶೇ 33 ಅಂಕಗಳಿಗೆ ಉತ್ತೀರ್ಣತೆಯ ಮಾನದಂಡವನ್ನು ಅನುಸರಿಸಿ ಉತ್ತೀರ್ಣರಾಗಲು ಸರ್ಕಾರದ ಆದೇಶ ಮಾಡಿದ ಕರ್ನಾಟಕ ಘನ ಸರ್ಕಾರದ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರಿಗೆ, ಸನ್ಮಾನ್ಯ ಉಪ ಮುಖ್ಯ ಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ರವರಿಗೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪರವರಿಗೆ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಮೇಡಂ ರವರಿಗೆ, ವಿಶೇಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ಮಹೇಶ್ ಮೇಡಂ ರವರಿಗೆ ಹಾಗೂ ಇದಕ್ಕೆ ಸಹಕರಿಸಿದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರುಗಳಿಗೆ ಹಾಗೂ ಮಾನ್ಯ ಆಯುಕ್ತರುಗಳಿಗೆ ಹಾಗೂ ಇಲಾಖೆಯ ಎಲ್ಲಾ ಉನ್ನತ ಅಧಿಕಾರಿಗಳ ವೃಂದಕ್ಕೆ ರಾಜ್ಯ ...
ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ ಮಾಡುತ್ತಿರುವುದು ಉತ್ತರ ಕರ್ನಾಟಕ ಜನತೆಗೆ ಮಾಡುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆಯಾಗಿದೆ. ಭೂಸ್ವಾದೀನ ಮಾಡಿಕೊಂಡು ಪರಿಹಾರ ಕೊಡದೆ ಸಂತ್ರಸ್ತರಿಗೆ ಅನ್ಯಾಯ ಮಾಡಲಾಗಿದೆ. ನ್ಯಾಯವಾದ ಬೆಲೆ ಕೊಡಿ ಇಲ್ಲವೇ ಯೋಜನೆ ಕೈಬಿಡಿ ಎಂದು ಸಂತ್ರಸ್ತರು ಅಗ್ರಹಿಸುತ್ತಿದ್ದಾರೆ. ಸನ್ಮಾನ್ಯ ಸಿದ್ದರಾಮಯ್ಯ ಅವರು ನಮ್ಮ ನಡಿಗೆ ಕೃಷ್ಣಾ ಕಡೆಗೆ ಎಂದು ಪಾದಯಾತ್ರೆ ಮಾಡಿದರು. ವರ್ಷಕ್ಕೆ 40,000 ಕೋಟಿ ಹಣ ನೀಡಿ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ಕೂಡಲಸಂಗಮದಲ್ಲಿ ಸಂಗಮನಾಥನ ಮೇಲೆ ಆಣೆ ಪ್ರಮಾಣ ಮಾಡಿದ್ದಾರೆ. ಬೆಳಗಾವಿಯ ಯೋಜನೆಯನ್ನು ನಮ್ಮ ಅವಧಿಯಲ್ಲಿಯೇ ಪೂರ್ಣಗೊಳಿಸುತ್ತೇವೆ ಎಂದು ಸಂತ್ರಸ್ತರಿಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಮಾತು ಕೊಟ್ಟಿದ್ದಾರೆ. ಕೃಷ್ಣಾ ನದಿಗೆ ಸೆಪ್ಟೆಂಬರ್ 6 ರಂದು ಬಾಗಿನ ಅರ್ಪಿಸಲು ಬಂದಾಗ ವಾರದಲ್ಲಿ ಬೆಲೆ ನಿಗದಿ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಆದರೆ ಇಲ್ಲಿಯವರೆಗೂ ಬೆಲೆ ನಿಗದಿ ಮಾಡದೆ ಯಾವುದೇ ರೀತಿಯ ತೀರ್...
Comments
Post a Comment