ವಸತಿ ಶಾಲೆಗಳ ನೌಕರರ ಸಂಘ(ರಿ), ಬೆಂಗಳೂರು, ವತಿಯಿಂದ ದಿ:26.05.2025 ಫ್ರೀಡಂ ಪಾರ್ಕ್ ನಲ್ಲಿ ಬಹು ಪ್ರತಿಭಟನೆ
ವಸತಿ ಶಾಲೆಗಳ ನೌಕರರ ಸಂಘ(ರಿ), ಬೆಂಗಳೂರು, ವತಿಯಿಂದ ದಿ:26.05.2025 ಫ್ರೀಡಂ ಪಾರ್ಕ್ ನಲ್ಲಿ ಬಹು ಪ್ರತಿಭಟನೆ
ರಿಂದ ವಿವಿಧ ಹಂತಗಳಲ್ಲಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿರುವ ಬಗ್ಗೆ, ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಖಾಯಂ ಶಿಕ್ಷಕರು/ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಈ ಕೆಳಕಂಡ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ.
1. ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್.ಸಿ, ಎಸ್.ಟಿ. ಬಿ.ಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡುವುದು.
2 3. ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸುವುದು.
. ನಗದು ರಹಿತ ಚಿಕಿತ್ಸೆಗಾಗಿ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸುವುದು.
4. ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡುವುದು.
5. ಹೆಚ್ಚುವರಿ ಕಾರ್ಯಾಭಾರ ಇರುವುದರಿಂದ 10% ವಿಶೇಷ ಭತ್ಯೆ ಮಂಜೂರಾತಿ,
ಈ ಮೇಲಿನ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಘನ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪರಿಹಾರ ಸಿಕ್ಕಿರುವುದಿಲ್ಲ. ಆದ್ದರಿಂದ ವಸತಿ ಶಾಲೆಗಳ ನೌಕರರ ಸಂಘ(ರಿ), ಬೆಂಗಳೂರು, ವತಿಯಿಂದ ದಿ:26.05.2025 ರಿಂದ 28.05.2025 ರವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂವಿಧಾನಾತ್ಮಕ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು
ದಿ:28.05.2025 ರೊಳಗೆ ನಮ್ಮ ಈ ಬೇಡಿಕೆಗಳು ಈಡೇರದಿದ್ದರೆ ಈ ಕೆಳಕಂಡಂತೆ ಜಿಲ್ಲಾ ಹಂತದಲ್ಲಿ ಸತ್ಯಾಗ್ರಹವನ್ನು ಕೈಗೊಳ್ಳಲಾಗುವುದು.
1. ದಿ:29.05.2025 ರಂದು ವಸತಿ ಶಾಲೆಯಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುವುದು.
2. ದಿ:30.05.2025 ರಂದು ತರಗತಿಗಳ ಬಹಿಷ್ಕಾರ ಮಾಡಿ ಅಸಹಕಾರ ವ್ಯಕ್ತಪಡಿಸುವುದು.
ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸುವುದು.
3. ದಿ:31.05.2025 ರಂದು ಪಾದಯಾತ್ರೆ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದು. 4. ದಿ:02.06.2025 ರಿಂದ ಮಾನ್ಯ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಅಥವಾ ವಸತಿ ಶಾಲೆಗಳ
ಈ ಮೇಲೆ ತಿಳಿಸಿದಂತೆ ವಿವಿಧ ಹಂತಗಳಲ್ಲಿ ಸಂವಿಧಾನಾತ್ಮಕವಾಗಿ ಧರಣಿ ಸತ್ಯಾಗ್ರಹವನ್ನು ಅನಿರ್ದಿಷ್ಟಾವಧಿವರೆಗೆ ಹಮ್ಮಿಕೊಳ್ಳಲಾಗುವುದು ಎಂಬ ವರದಿಯನ್ನು ತಮ್ಮ ಮಾಧ್ಯಮಗಳಲ್ಲಿ ಉಚಿತವಾಗಿ ಪ್ರಕಟಿಸಬೇಕಾಗಿ ವಿನಂತಿ.
ವಂದನೆಗಳೊಂದಿಗೆ,
ಪ್ರಧಾನ ಕಾರ್ಯದರ್ಶಿಗಳು
ತಮ್ಮ ವಿಶ್ವಾಸಿಗಳು
ಅಧ್ಯಕ್ಷರು/ ರವಿಚಂದ್ರ
ವಸತಿ ಶಾಲೆಗಳ ನೌಕರರ ಸಂಘ(ರಿ)


Comments
Post a Comment