ವಿದ್ಯಾರ್ಥಿಗಳಿಗೆ ಶಿಸ್ತು ಬೆಳೆಸುವಲ್ಲಿ ಸ್ಕೌಟ್ಸ್- ಗೈಡ್ಸ್ ಸಂಸ್ಥೆಯ ಪಾತ್ರ ಅನನ್ಯ: ರಾಮಲಿಂಗಾರೆಡ್ಡಿ

 

ವಿದ್ಯಾರ್ಥಿಗಳಿಗೆ ಶಿಸ್ತು ಬೆಳೆಸುವಲ್ಲಿ ಸ್ಕೌಟ್ಸ್- ಗೈಡ್ಸ್ ಸಂಸ್ಥೆಯ ಪಾತ್ರ ಅನನ್ಯ: ರಾಮಲಿಂಗಾರೆಡ್ಡ



ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಶಿಸ್ತು, ದೈಹಿಕ ಸಾಮರ್ಥ್ಯ ಹಾಗೂ

 ಉತ್ತಮ ಮನಸ್ಥಿತಿ ಬೆಳೆಸುವಲ್ಲಿ ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕ್ರೀಡಾ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ  ಹೇಳಿದರು.

ಶನಿವಾರ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಲಾ ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕಗಳ ಓದಿಗೆ ಸೀಮಿತವಾಗಬಾರದು. ಓದಿನ ಜತೆಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದರಿಂದ ಶಿಸ್ತು, ಸಮಯಪಾಲನೆ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ /ಎಸ್‌ಟಿ ನೌಕರರ ಸಮನ್ವಯ ಸಮಿತಿ (ರಿ) ಹಾಗೂ ಕರ್ನಾಟಕ ರಾಜ್ಯ 'ಗ್ರಾಮೀಣಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯ ಎಸ್‌ಸಿ / ಎಸ್‌ಟಿ ಅಧಿಕಾರಿಗಳು ಮತ್ತು ನೌಕರರುಗಳ ಸಂಘದ ಜಂಟಿ ಪತ್ರಿಕಾ ಹೇಳಿಕೆ