ಜುಲೈ 09 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ರಾಜ್ಯದಲ್ಲಿಯೂ ಬೆಂಗಳೂರನ್ನು ಒಳಗೊಂಡು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕೈಗಾರಿಕೆ ಮುಷ್ಕರ ನಡೆಯಲಿದೆ.
ಜುಲೈ 09 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ರಾಜ್ಯದಲ್ಲಿಯೂ ಬೆಂಗಳೂರನ್ನು ಒಳಗೊಂಡು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕೈಗಾರಿಕೆ ಮುಷ್ಕರ ನಡೆಯಲಿದೆ. ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ 4 ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಜುಲೈ 09 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ರಾಜ್ಯದಲ್ಲಿಯೂ ಬೆಂಗಳೂರನ್ನು ಒಳಗೊಂಡು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕೈಗಾರಿಕೆ ಮುಷ್ಕರ ನಡೆಯಲಿದೆ. ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತ್ರತ್ವದ ಎನ್ಡಿಎ ಸರ್ಕಾರ ದುಡಿಯುವ ಜನರ ಹಕ್ಕುಗಳನ್ನು ಕಸಿಯುತ್ತಿದೆ. ಶ್ರಮ ಜೀವಿಗಳ ಜೀವನ-ಜೀವನೋಪಾಯಗಳ ಮೇಲೆ ಕೂರ ದಾಳಿಗಳನ್ನು ಮಾಡುತ್ತಿದೆ. ಈ ಪರಿಸ್ಥಿತಿಗಳನ್ನು ಸುಧಾರಿಸಬೇಕಾದಂತಹ ಸರ್ಕಾರ ತಜ್ಞರುದ್ಧವಾಗಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಮೂಲಕ ಇವುಗಳನ್ನು ದುಡಿಯುವ ಜನರ ಮೇಲೆ ಒತ್ತಾಯ ಪೂರ್ವವಕಾಗಿ ಹೇರುತ್ತದೆ. ಆ ಮೂಲಕ ಹಾಲಿ ಇರುವ ದುಡಿಯುವ ಜನರ ಹಕ್ಕುಗಳು ಮತ್ತು ಸವಲತ್ತುಗಳನ್ನು ಕಸಿಯಲು ಹೊರಟಿದೆ. ಕೆಲಸದ ಪರಿಸ್ಥಿತಿ, ಕಾರ್ಮಿಕರ ದುಡಿಯುವ ಅವಧಿ, ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಸಂಘಟನೆಯ ಹಕ್ಕು, ಸಾಮೂಹಿಕ ಚೌಕಾಸಿಯ ಹಕ್ಕು, ಹೋರಾಟದ ಹಕ್ಕು ಮತ್ತು ಮುಷ್ಕರಗಳ ಹಕ್ಕುಗಳನ್ನು ದಮನಗೊಳಿಸುವ ನೀತಿಗಳು ಕಾಯ್ದೆಯಲ್ಲಿ ಒಳಗೊಂಡಿದೆ. ಕಾರ್ಮಿಕರು ತಮ...